ಮಂಗಳೂರು, ಫೆಬ್ರವರಿ 15: ಕರಾವಳಿಯ ಬ್ಯಾರಿ ಭಾಷೆಯ ಖ್ಯಾತ ಲೇಖಕ ಅಬ್ದುಲ್ ರಹೀಂ ಟಿ.ಕೆ.(65) ಶುಕ್ರವಾರ ಮಂಗಳೂರಿನಲ್ಲಿ ನಿಧನರಾದರು. ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅಬ್ದುಲ್ ರಹೀಂ ಮಂಗಳೂರಿನ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಬ್ಯಾರಿ ಆಂದೋಲನದ ರೂವಾರಿ ಎಂದೇ ಹೇಳಲಾಗುತ್ತಿದ್ದ ಅಬ್ದುಲ್ ರಹೀಮ್ ಖ್ಯಾತ ಉದ್ಯಮಿ, ಕವಿ, ಲೇಖಕ, ಅನುವಾದಕರಾಗಿ ಗುರುತಿಸಿಕೊಂಡಿದ್ದರು. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಟೀಕೇಸ್ ಕಾನ್ಸೆಪ್ಟ್ಸ್ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಇವರು ಓರ್ವ ಹವ್ಯಾಸಿ ಕವಿ ಮತ್ತು ಲೇಖಕರಾಗಿದ್ದರು. ಸಮಾಜದ ಬಗ್ಗೆ ಕಳಕಳಿ ಇರುವ ಭಾವಜೀವಿಯಾಗಿದ್ದ ಇವರು ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್ತಿನ ಸ್ಥಾಪಕಾಧ್ಯಕ್ಷರಾಗಿದ್ದರು. ಬ್ಯಾರಿ ಭಾಷಾ ಆಂದೋಲನದಲ್ಲಿ ಪೂರ್ಣ ಪ್ರಮಾಣದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
1998ರಲ್ಲಿ ಮಂಗಳೂರು ಪುರಭವನದಲ್ಲಿ ನೆರವೇರಿದ ಐತಿಹಾಸಿಕ ಪ್ರಥಮ ಬ್ಯಾರಿ ಸಾಹಿತ್ಯ ಸಮ್ಮೇಳನದ ಸಂಚಾಲಕರಾಗಿದ್ದ ಅಬ್ದುಲ್ ರಹೀಮ್ ಆನಂತರ ಸ್ಥಾಪನೆಯಾದ ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರಾಗಿದ್ದವರು.
ಇವರ ಅವಧಿಯಲ್ಲಿ 1999ರಲ್ಲಿ ಬಂಟ್ವಾಳದ ನೇರಳ ಕಟ್ಟೆಯಲ್ಲಿ ಜರುಗಿದ 2ನೇ ಮತ್ತು 2001ರಲ್ಲಿ ಉಡುಪಿಯಲ್ಲಿ ನೆರವೇರಿದ 3ನೇ ಬ್ಯಾರಿ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿತ್ತು. ಬ್ಯಾರಿ ಸಾಹಿತ್ಯ ಅಕಾಡೆಮಿಯನ್ನು ದೊರಕಿಸಿ ಕೊಡುವಲ್ಲಿ ಇವರ ಪ್ರಯತ್ನ ಅಪಾರ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್