ನವದೆಹಲಿ: ಅಯೋಧ್ಯೆಯ ರಾಮಜನ್ಮ ಭೂಮಿ–ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣದ ವಿಚಾರಣೆ ನಡೆಸಲು ಐವರು ನ್ಯಾಯಮೂರ್ತಿಗಳಿರುವ ಹೊಸದೊಂದು ಸಾಂವಿಧಾನಿಕ ಪೀಠವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪುನರ್ ರಚಿಸಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನೂತನ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಸ್.ಎ.ಬಾಬ್ಡೆ, ಡಿ.ವೈ ಚಂದ್ರಾಚೂಡ್, ಅಶೋಕ್ ಭೂಷಣ್, ಎಸ್.ಎ. ನಾಜೀರ್ ಇದ್ದಾರೆ.
ನ್ಯಾಯಮೂರ್ತಿ ಯು.ಯು.ಲಲಿತ್ ಅವರು ವಿಚಾರಣಾ ಪೀಠದಿಂದ ಹಿಂದೆ ಸರಿದ ಬಳಿಕ ಹೊಸ ಪೀಠವನ್ನು ರಚಿಸಲಾಗಿದೆ. ಜನವರಿ 10 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎನ್.ವಿ.ರಮಣ ಅವರೂ ಹೊಸ ಪೀಠದಲ್ಲಿಲ್ಲ.
ಈ ಸಂಬಂಧ ರಾಜಕೀಯ ಪಕ್ಷಗಳಿಗೆ ನೋಟಿಸ್ ನೀಡಿರುವ ಸುಪ್ರಿಂ ಕೋರ್ಟ್ ರಿಜಿಸ್ಟ್ರಾರ್, ‘ವಿವಾದಿತ ಅಯೋಧ್ಯೆ ಪ್ರಕರಣದ ವಿಚಾರಣೆಯನ್ನು ಸಾಂವಿಧಾನಿಕ ಪೀಠದೆದುರು ಎತ್ತಿಕೊಳ್ಳುವ ಮುನ್ನ, ಜ.29 ರಂದು(ಗುರುವಾರ) ಮುಖ್ಯ ನ್ಯಾಯಮೂರ್ತಿಗಳ ಅಂಗಳಲ್ಲಿ ವಿಚಾರಣೆಗೊಳಪಡಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ