ರಿಯಾದ್: ನಾಲ್ಕು ಮಂದಿ ವಿದೇಶೀ ಕಾರ್ಮಿಕರಿರುವ ಸಣ್ಣ ಕಂಪೆನಿಗಳಿಗೆ ಲೆವಿ ಅನ್ವಯಿಸುವುದಿಲ್ಲ. ಕೃಷಿ, ಮೀನುಗಾರಿಕೆ ಮತ್ತು ಜಾನುವಾರು ಸಾಕಾಣಿಕೆ ಮುಂತಾದ ವಲಯದ ಕೆಲಸಗಾರರನ್ನು ದೇಶೀಯ ಕಾರ್ಮಿಕ ವಿಭಾಗದಲ್ಲಿ ಸೇರ್ಪಡೆಗೊಳಿಸಲಾಗಿದ್ದು, ಆದ್ದರಿಂದ ಅವರಿಗೆ ಕೆಲಸದ ಪರವಾನಿಗೆ ಅಗತ್ಯವಿಲ್ಲ ಎಂದು ಸೌದಿ ಕಾರ್ಮಿಕ ಸಚಿವಾಲಯ ಹೇಳಿದೆ.
ಪ್ರಾಯೋಜಕರಿಂದ ತಪ್ಪಿಸಿಕೊಂಡ ಮನೆ ಚಾಲಕರ ಬದಲಿಗೆ ಉದ್ಯೋಗಿಗಳನ್ನು ನೇಮಕ ಮಾಡಲು ಅನುಮತಿ ನೀಡಲಾಗುವುದಿಲ್ಲ. ಗೃಹ ಕಾರ್ಮಿಕರ ನೇಮಕಾತಿಗಾಗಿ ಬ್ಯಾಂಕ್ ಠೇವಣಿಗಳನ್ನು ರೂ 3.5 ಲಕ್ಷವಾಗಿ ಕಡಿತಗೊಳಿಸಲಾಗಿದೆ ಎಂದು ಸಚಿವಾಲಯ ವ್ಯಕ್ತಪಡಿಸಿದೆ. ಕೆಲಸದಲ್ಲಿ ಕಾರ್ಯಕ್ಷಮತೆ ಇಲ್ಲದ ಮನೆ ಕೆಲಸದಾಕೆ ಯನ್ನು ಮೂರು ತಿಂಗಳೊಳಗೆ ನೇಮಕಾತಿ ಕಛೇರಿಗಳಿಗೆ ಮರಳಿಸಬೇಕು. ನೇಮಕಾತಿ ಕಂಪನಿಗಳಿಂದ ಹೊಸ ವ್ಯಕ್ತಿಯನ್ನು ಆಯ್ಕೆಮಾಡಲು ಉದ್ಯೋಗದಾತರಿಗೆ ಅನುಮತಿ ನೀಡಲಾಗಿದೆ ಎಂದು ಕಾರ್ಮಿಕ ಸಚಿವಾಲಯ ತಿಳಿಸಿದೆ.
ವ್ಯಕ್ತಿಗಳಿಗೆ ಮೂರು ವಿಭಾಗಗಳ ಮನೆ ಕೆಲಸಗಾರರನ್ನು ನೇಮಕಗೊಳಿಸಲು ವೀಸಾ ಅನುಮತಿಸಲಾಗುತ್ತದೆ. ವೀಸಾ ಅನುಮತಿಗಾಗಿ ಠೇವಣಿ ಇರಿಸಬೇಕಾದ ಬ್ಯಾಂಕ್ ಬ್ಯಾಲೆನ್ಸ್ ಅನ್ನು 5 ಲಕ್ಷದಿಂದ ಮೂರುವರೆ ಲಕ್ಷವಾಗಿ ಕಡಿತಗೊಳಿಸಲಾಗಿದೆ. ವೀಸಾಕ್ಕೆ ಅರ್ಜಿ ಸಲ್ಲಿಸುವವರು ಉದ್ಯೋಗ ಪ್ರಮಾಣಪತ್ರವನ್ನು ಹಾಜರುಪಡಿಸಿದರೆ ಸಾಕಾಗುತ್ತವೆ ಎಂದು ಕಾರ್ಮಿಕ ಸಚಿವಾಲಯ ಹೇಳಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ