ರಿಯಾದ್: ನಾಲ್ಕು ಮಂದಿ ವಿದೇಶೀ ಕಾರ್ಮಿಕರಿರುವ ಸಣ್ಣ ಕಂಪೆನಿಗಳಿಗೆ ಲೆವಿ ಅನ್ವಯಿಸುವುದಿಲ್ಲ. ಕೃಷಿ, ಮೀನುಗಾರಿಕೆ ಮತ್ತು ಜಾನುವಾರು ಸಾಕಾಣಿಕೆ ಮುಂತಾದ ವಲಯದ ಕೆಲಸಗಾರರನ್ನು ದೇಶೀಯ ಕಾರ್ಮಿಕ ವಿಭಾಗದಲ್ಲಿ ಸೇರ್ಪಡೆಗೊಳಿಸಲಾಗಿದ್ದು, ಆದ್ದರಿಂದ ಅವರಿಗೆ ಕೆಲಸದ ಪರವಾನಿಗೆ ಅಗತ್ಯವಿಲ್ಲ ಎಂದು ಸೌದಿ ಕಾರ್ಮಿಕ ಸಚಿವಾಲಯ ಹೇಳಿದೆ.
ಪ್ರಾಯೋಜಕರಿಂದ ತಪ್ಪಿಸಿಕೊಂಡ ಮನೆ ಚಾಲಕರ ಬದಲಿಗೆ ಉದ್ಯೋಗಿಗಳನ್ನು ನೇಮಕ ಮಾಡಲು ಅನುಮತಿ ನೀಡಲಾಗುವುದಿಲ್ಲ. ಗೃಹ ಕಾರ್ಮಿಕರ ನೇಮಕಾತಿಗಾಗಿ ಬ್ಯಾಂಕ್ ಠೇವಣಿಗಳನ್ನು ರೂ 3.5 ಲಕ್ಷವಾಗಿ ಕಡಿತಗೊಳಿಸಲಾಗಿದೆ ಎಂದು ಸಚಿವಾಲಯ ವ್ಯಕ್ತಪಡಿಸಿದೆ. ಕೆಲಸದಲ್ಲಿ ಕಾರ್ಯಕ್ಷಮತೆ ಇಲ್ಲದ ಮನೆ ಕೆಲಸದಾಕೆ ಯನ್ನು ಮೂರು ತಿಂಗಳೊಳಗೆ ನೇಮಕಾತಿ ಕಛೇರಿಗಳಿಗೆ ಮರಳಿಸಬೇಕು. ನೇಮಕಾತಿ ಕಂಪನಿಗಳಿಂದ ಹೊಸ ವ್ಯಕ್ತಿಯನ್ನು ಆಯ್ಕೆಮಾಡಲು ಉದ್ಯೋಗದಾತರಿಗೆ ಅನುಮತಿ ನೀಡಲಾಗಿದೆ ಎಂದು ಕಾರ್ಮಿಕ ಸಚಿವಾಲಯ ತಿಳಿಸಿದೆ.
ವ್ಯಕ್ತಿಗಳಿಗೆ ಮೂರು ವಿಭಾಗಗಳ ಮನೆ ಕೆಲಸಗಾರರನ್ನು ನೇಮಕಗೊಳಿಸಲು ವೀಸಾ ಅನುಮತಿಸಲಾಗುತ್ತದೆ. ವೀಸಾ ಅನುಮತಿಗಾಗಿ ಠೇವಣಿ ಇರಿಸಬೇಕಾದ ಬ್ಯಾಂಕ್ ಬ್ಯಾಲೆನ್ಸ್ ಅನ್ನು 5 ಲಕ್ಷದಿಂದ ಮೂರುವರೆ ಲಕ್ಷವಾಗಿ ಕಡಿತಗೊಳಿಸಲಾಗಿದೆ. ವೀಸಾಕ್ಕೆ ಅರ್ಜಿ ಸಲ್ಲಿಸುವವರು ಉದ್ಯೋಗ ಪ್ರಮಾಣಪತ್ರವನ್ನು ಹಾಜರುಪಡಿಸಿದರೆ ಸಾಕಾಗುತ್ತವೆ ಎಂದು ಕಾರ್ಮಿಕ ಸಚಿವಾಲಯ ಹೇಳಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ