ವಾಷಿಂಗ್ಟನ್: 2019ರಲ್ಲಿ ಜಗತ್ತಿನಾದ್ಯಂತ ಉಂಟಾಗಬಹುದಾದ ಅಪಾಯ ಸಂದರ್ಭಗಳ ಪರಿಶೀಲನೆ ಕೈಗೊಂಡಿರುವ ಅಮೆರಿಕದ ಗುಪ್ತಚರ ಇಲಾಖೆಯು, ಭಾರತದ ಮುಂಬರುವ ಚುನಾವಣೆಯಲ್ಲಿ ಕೋಮು ಗಲಭೆ ನಡೆಯುವ ಸಾಧ್ಯತೆ ಹೇರಳವಾಗಿರುವ ಕುರಿತು ಲಿಖಿತ ವರದಿಯನ್ನು ಅಮೆರಿಕ ಗುಪ್ತಚರ ಇಲಾಖೆ ನಿರ್ದೇಶ ಡ್ಯಾನ್ ಕೋಟ್ಸ್ ಗುಪ್ತಚರ ಸಮಿತಿಗೆ(ಸೆನೆಟ್ ಸೆಲೆಕ್ಟ್ ಕಮಿಟಿ ಆನ್ ಇಂಟೆಲಿಜೆನ್ಸ್) ಸಲ್ಲಿಸಿದ್ದಾರೆ.
’ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಹಿಂದೂ ರಾಷ್ಟ್ರೀಯತೆಗೆ ಒತ್ತು ನೀಡಿದರೆ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕೋಮು ಗಲಭೆಗೆ ಕಾರಣವಾಗಲಿದೆ’ ಎಂದು ಕೋಟ್ಸ್ ಗುಪ್ತಚರ ಸಮಿತಿಯ ಸದಸ್ಯರಿಗೆ ತಿಳಿಸಿದ್ದಾರೆ.
ಭಾರತ ಪ್ರವಾಸದಿಂದ ಇತ್ತೀಚೆಗಷ್ಟೆ ಹಿಂದಿರುಗಿರುವ ಸಿಐಎ ನಿರ್ದೇಶಕ ಗಿನಾ ಹಾಸ್ಪೆಲ್, ಎಫ್ಬಿಐ ನಿರ್ದೇಶಕ ಕ್ರಿಸ್ಟೋಫರ್ ವ್ರೇ ಹಾಗೂ ರಕ್ಷಣಾ ಗುಪ್ತಚರ ಸಂಸ್ಥೆ ನಿರ್ದೇಶಕ ರಾಬರ್ಟ್ ಆಶ್ಲೆ ಸೇರಿದಂತೆ ಗುಪ್ತಚರ ಸಮಿತಿಯ ಹಲವು ಪ್ರಮುಖರು ಜಗತ್ತಿನಾದ್ಯಂತ ಉಂಟಾಗಬಹುದಾದ ಅಪಾಯದ ಸಂದರ್ಭಗಳ ಪರಿಶೀಲನಾ ವರದಿ ಪ್ರಸ್ತುತ ಪಡಿಸುವ ಸಭೆಯಲ್ಲಿ ಭಾಗಿಯಾಗಿದ್ದರು.
ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಮೊದಲ ಅವಧಿಯಲ್ಲಿ ರೂಪಿಸಿರುವ ನಿಯಮಗಳು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕೋಮುಗಳ ನಡುವೆ ತಲ್ಲಣ ಉಂಟು ಮಾಡಿವೆ. ಹಿಂದುತ್ವ ಬಿಂಬಿಸುವ ನಾಯಕರು ಹಿಂದೂ ರಾಷ್ಟ್ರೀಯತೆ ಪ್ರಚಾರದಲ್ಲಿ ತೊಡಗಿದರೆ ಬೆಂಬಲಿಗರು ಗಲಭೆ ಸೃಷ್ಟಿಸುವ ಸಂಭವವಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ’ಕೋಮು ಗಲಭೆ ಹೆಚ್ಚಿದರೆ ಭಾರತೀಯ ಮುಸ್ಲಿಮರಲ್ಲಿ ಪರಕೀಯ ಭಾವ ಮೂಡಿಸಲಿದೆ ಹಾಗೂ ಇಸ್ಲಾಮಿಕ್ ಉಗ್ರ ಸಂಘಟನೆಗಳು ಭಾರತದಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ’ ಎಂದು ಕೋಟ್ಸ್ ಎಚ್ಚರಿಸಿದ್ದಾರೆ.
2019ರ ಮೇನಲ್ಲಿ ಪ್ರಧಾನಿ ಮೋದಿ ಅವರ ಐದು ವರ್ಷಗಳ ಅಧಿಕಾರ ಅವಧಿ ಪೂರ್ಣಗೊಳ್ಳಲಿದ್ದು, ಮೇ ಅಂತ್ಯದೊಳಗೆ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡು ಹೊಸ ಸರ್ಕಾರ ರಚನೆಯಾಗಬೇಕಿದೆ. ಭಾರತ–ಪಾಕಿಸ್ತಾನ ಸಂಬಂಧ ಹದಗೆಟ್ಟಿರುವ ಬಗ್ಗೆಯೂ ಕೋಟ್ಸ್ ಪ್ರಸ್ತಾಪಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
ಇರಾನ್ ಒಪ್ಪಂದ ಪಾಲಿಸದಿದ್ದರೆ ನೆತ್ತಿ ಮೇಲೆ ಬಾಂಬ್ ವರ್ಷಣ- ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
“ಬೆಲೆ ಏರಿಕೆ ನನಗೆ ಇಷ್ಟ”-ಇರಾನ್ ಯುದ್ಧದ ಕಾರಣದಿಂದ ಉಂಟಾದ ಬೆಲೆ ಏರಿಕೆಯ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
‘ಯುದ್ಧ ಕೊನೆಗೊಳಿಸುವುದಕ್ಕೆ ಆದ್ಯತೆ ನೀಡಬೇಕು’- ಅಮೆರಿಕದ 14 ಅಂಶಗಳ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ
ಕೊಲೆ ಬೆದರಿಕೆ, ದಂಗೆಯ ಸಾಧ್ಯತೆ; ನಿವಾಸ ಬಿಟ್ಟು ಹೊರಬಾರದ ಪುಟಿನ್- ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ