ರಿಯಾದ್: ರಿಯಾದಿನ ಜೆ ಆ್ಯಂಡ್ ಪಿ ಕಂಪನಿಯಲ್ಲಿರುವ ಭಾರತೀಯ ಕಾರ್ಮಿಕರ ಕೆಲಸದ ಬಗೆಗಿನ ಸಮಸ್ಯೆಗೆ ಪರಿಹಾರ ಕಾಣುವ ಸಲುವಾಗಿ ಕೇಂದ್ರ ವಿದೇಶಾಂಗ ಸಹ ಸಚಿವ ವಿ.ಕೆ.ಸಿಂಗ್ ರಿಯಾದ್ ತಲುಪಿದ್ದಾರೆ.
ಸೌದಿ ಅರೇಬಿಯಾದಲ್ಲಿನ ಭಾರತದ ರಾಯಭಾರಿ ಅಹ್ಮದ್ ಜಾವೇದ್, ಡಿಸಿಎಂ ಡಾ. ಹುಸೈನ್ ಅಜಾಝ್ ಖಾನ್ ಇತರ ಹಿರಿಯ ಅಧಿಕಾರಿಗಳು ಸೇರಿ ಸಚಿವರನ್ನು ಸ್ವೀಕರಿಸಿದರು.
ಕಾರ್ಮಿಕರ ಸಮಸ್ಯೆಗೆ ಪರಿಹಾರ ಕಾಣುವ ಸಲುವಾಗಿ ಸಚಿವರು, ಸೌದಿ ಕಾರ್ಮಿಕ, ಸಾಮಾಜಿಕ ಸಚಿವ ಅಹ್ಮದ್ ಸುಲೈಮಾನ್ ಅಲ್ ರಾಜ್ಹಿ, ಗೃಹಖಾತೆಯ ಸಹಸಚಿವ ನಾಸರ್ ಬಿನ್ ಅಬ್ದುಲ್ ಅಝೀಝ್ ಜೊತೆ ಮಾತುಕತೆ ನಡೆಸಿದರು.
ಅಂಬಾಸಿಡರ್ ಅಹ್ಮದ್ ಜಾವಿದ್, ಡಾ. ಹುಸೈನ್ ಅಜಾಝ್ ಖಾನ್ ಸಭೆಯಲ್ಲಿ ಉಪಸ್ಥಿತರಿದ್ದರು.
ಲ್ಯಾಬ್ ಸಂದರ್ಶಿಸಿದ ಸಚಿವರು, ಕಾರ್ಮಿಕರಿಂದ ವಿವರಗಳನ್ನು ಪಡೆದರು. ಸಂಬಳ ಮತ್ತು ಕೆಲಸವೂ ಇಲ್ಲದೆ ಸುಮಾರು 800 ಕಾರ್ಮಿಕರು ಕ್ಯಾಂಪ್ನಲ್ಲಿ ಉಳಿದುಕೊಂಡಿದ್ದಾರೆ. ಇವರ ಪೈಕಿ ಹೆಚ್ಚಿನವರ ಇಖಾಮಾ ಕಾಲಾವಧಿ ಮುಗಿದಿರುವ ಕಾರಣ ಊರಿಗೆ ಮರಳುವುದೂ ಕಷ್ಟಕರವಾಗಿದೆ. ಈ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ಗೆ ಮಾಹಿತಿ ನೀಡಿದಾಗ ಅವರು, ಪ್ರತ್ಯೇಕ ನಿರ್ದೇಶನ ನೀಡಿ ಸಹ ಸಚಿವ ವಿ.ಕೆ.ಸಿಂಗ್ರನ್ನು ಸೌದಿ ಅರೇಬಿಯಾಗೆ ಕಳುಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ