ರಿಯಾದ್: ರಿಯಾದಿನ ಜೆ ಆ್ಯಂಡ್ ಪಿ ಕಂಪನಿಯಲ್ಲಿರುವ ಭಾರತೀಯ ಕಾರ್ಮಿಕರ ಕೆಲಸದ ಬಗೆಗಿನ ಸಮಸ್ಯೆಗೆ ಪರಿಹಾರ ಕಾಣುವ ಸಲುವಾಗಿ ಕೇಂದ್ರ ವಿದೇಶಾಂಗ ಸಹ ಸಚಿವ ವಿ.ಕೆ.ಸಿಂಗ್ ರಿಯಾದ್ ತಲುಪಿದ್ದಾರೆ.
ಸೌದಿ ಅರೇಬಿಯಾದಲ್ಲಿನ ಭಾರತದ ರಾಯಭಾರಿ ಅಹ್ಮದ್ ಜಾವೇದ್, ಡಿಸಿಎಂ ಡಾ. ಹುಸೈನ್ ಅಜಾಝ್ ಖಾನ್ ಇತರ ಹಿರಿಯ ಅಧಿಕಾರಿಗಳು ಸೇರಿ ಸಚಿವರನ್ನು ಸ್ವೀಕರಿಸಿದರು.
ಕಾರ್ಮಿಕರ ಸಮಸ್ಯೆಗೆ ಪರಿಹಾರ ಕಾಣುವ ಸಲುವಾಗಿ ಸಚಿವರು, ಸೌದಿ ಕಾರ್ಮಿಕ, ಸಾಮಾಜಿಕ ಸಚಿವ ಅಹ್ಮದ್ ಸುಲೈಮಾನ್ ಅಲ್ ರಾಜ್ಹಿ, ಗೃಹಖಾತೆಯ ಸಹಸಚಿವ ನಾಸರ್ ಬಿನ್ ಅಬ್ದುಲ್ ಅಝೀಝ್ ಜೊತೆ ಮಾತುಕತೆ ನಡೆಸಿದರು.
ಅಂಬಾಸಿಡರ್ ಅಹ್ಮದ್ ಜಾವಿದ್, ಡಾ. ಹುಸೈನ್ ಅಜಾಝ್ ಖಾನ್ ಸಭೆಯಲ್ಲಿ ಉಪಸ್ಥಿತರಿದ್ದರು.
ಲ್ಯಾಬ್ ಸಂದರ್ಶಿಸಿದ ಸಚಿವರು, ಕಾರ್ಮಿಕರಿಂದ ವಿವರಗಳನ್ನು ಪಡೆದರು. ಸಂಬಳ ಮತ್ತು ಕೆಲಸವೂ ಇಲ್ಲದೆ ಸುಮಾರು 800 ಕಾರ್ಮಿಕರು ಕ್ಯಾಂಪ್ನಲ್ಲಿ ಉಳಿದುಕೊಂಡಿದ್ದಾರೆ. ಇವರ ಪೈಕಿ ಹೆಚ್ಚಿನವರ ಇಖಾಮಾ ಕಾಲಾವಧಿ ಮುಗಿದಿರುವ ಕಾರಣ ಊರಿಗೆ ಮರಳುವುದೂ ಕಷ್ಟಕರವಾಗಿದೆ. ಈ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ಗೆ ಮಾಹಿತಿ ನೀಡಿದಾಗ ಅವರು, ಪ್ರತ್ಯೇಕ ನಿರ್ದೇಶನ ನೀಡಿ ಸಹ ಸಚಿವ ವಿ.ಕೆ.ಸಿಂಗ್ರನ್ನು ಸೌದಿ ಅರೇಬಿಯಾಗೆ ಕಳುಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು