ನವದೆಹಲಿ: ಶಬರಿಮಲೆಗೆ ಎಲ್ಲ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿಗೆ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಬೆಂಬಲ ವ್ಯಕ್ತಪಡಿಸುವ ಮೂಲಕ ಬುಧವಾರ ತನ್ನ ನಿಲುವು ಬದಲಿಸಿಕೊಂಡಿದೆ.
ಕೇರಳ ಸರ್ಕಾರದ ಪ್ರತಿನಿಧಿಗಳನ್ನು ಒಳಗೊಂಡಿರುವ ತಿರುವಾಂಕೂರು ದೇವಸ್ವಂ ಮಂಡಳಿಯು, ’ಜೈವಿಕ ಲಕ್ಷಣಗಳ ಆಧಾರದ ಮೇಲೆ ಒಂದು ವರ್ಗದ ಜನರನ್ನು ಬೇರೆಯಾಗಿ ಕಾಣಬಾರದು’ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಂವಿಧಾನ ಪೀಠದ ಮುಂದೆ ಅಭಿಪ್ರಾಯ ದಾಖಲಿಸಿತು.
2018ರ ಸೆಪ್ಟೆಂಬ್ 28ರಂದು ಸುಪ್ರೀಂ ಕೋರ್ಟ್ ನೀಡಿದ ಆದೇಶಕ್ಕೆ ಬದ್ಧರಾಗಿರುವುದಾಗಿ ಹೇಳಿದ ಕೇರಳ ಸರ್ಕಾರ, ತೀರ್ಪು ಮರುಪರಿಶೀಲನೆಗಾಗಿ ಸಲ್ಲಿಕೆಯಾದ ಅರ್ಜಿಗಳನ್ನು ವಜಾ ಮಾಡುವಂತೆ ಮನವಿ ಮಾಡಿತು.
’ಅನುಚ್ಛೇದ 25(1)ರಂತೆ ಧರ್ಮದ ಆಚರಣೆಯಲ್ಲಿ ಎಲ್ಲರಿಗೂ ಸಮಾನ ಅವಕಾಶವಿದೆ’ ಎಂಬುದನ್ನು ಟಿಡಿಪಿ ಪರವಾಗಿ ಹಿರಿಯ ವಕೀಲ ರಾಕೇಶ್ ದ್ವಿವೇದಿ, ನ್ಯಾಯಮೂರ್ತಿಗಳಾದ ಆರ್.ಎಫ್.ನರಿಮನ್, ಎ.ಎಂ. ಖಾನ್ವಿಲ್ಕರ್, ಡಿ.ವೈ. ಚಂದ್ರಚೂಡ್ ಮತ್ತು ಇಂದೂ ಮಲ್ಹೋತ್ರಾ ಅವರನ್ನು ಒಳಗೊಂಡ ನ್ಯಾಯಪೀಠದ ಮುಂದೆ ಪ್ರಸ್ತಾಪಿಸಿದರು.
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶ ಅವಕಾಶ ಕೊಡುವ ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆಯನ್ನು ಬುಧವಾರ ನಡೆಸಿದ ಸುಪ್ರೀಂ ಕೋರ್ಟ್, ತೀರ್ಪು ಕಾಯ್ದಿರಿಸಿದೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ