ಬೆಂಗಳೂರು (ಫೆ.13): ರಾಜ್ಯದಲ್ಲಿ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿ ಆಪರೇಷನ್ ಕಮಲಕ್ಕೆ ಮುಂದಾಗಿದ್ದ ಬಿಜೆಪಿಗೆ ಈಗ ತೀವ್ರ ಹಿನ್ನಡೆಯಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈ ಯೋಜನೆಯನ್ನು ಸದ್ಯಕ್ಕೆ ಕೈ ಬಿಡುವ ನಿರ್ಧಾರಕ್ಕೆ ಬಂದಿದ್ದಾರೆ.
ಸದ್ಯ, ಬಿಜೆಪಿಯಲ್ಲೇ ಕಿತ್ತಾಟ ಶುರುವಾಗಿದೆ. ಇದರ ಜೊತೆಗೆ, ಯಡಿಯೂರಪ್ಪ, ಶಿವನಗೌಡ ನಾಯಕ್ ವಿರುದ್ಧ ಮೈತ್ರಿ ಸರ್ಕಾರದ ನಾಯಕರು ಆಡಿಯೋ ಬಾಂಬ್ ಸಿಡಿಸಿದ್ದಾರೆ. ಈ ಮಧ್ಯೆ, ಬಿಜೆಪಿಯ ಪ್ರತಿ ಯೋಜನೆ ಕೂಡ ಸೋರಿಕೆ ಆಗುತ್ತಿದೆ ಎನ್ನಲಾಗಿದೆ. ಈ ವಿಚಾರವಾಗಿ ಬಿ.ಎಲ್. ಸಂತೋಷ್, ಅನಂತ್ ಕುಮಾರ್ ಹೆಗಡೆ, ವಿ. ಸೋಮಣ್ಣ ಸೇರಿದಂತೆ ಹಲವರ ವಿರುದ್ಧ ಯಡಿಯೂರಪ್ಪ ಸಿಟ್ಟಿಗೆದ್ದಿದ್ದಾರಂತೆ. ಹಾಗಾಗಿ, ಲೋಕಸಭೆ ಚುನಾವಣೆಯವರೆಗೆ ಆಪರೇಷನ್ ಕೈ ಬಿಡುವ ನಿರ್ಧಾರಕ್ಕೆ ಬಂದಿದ್ದಾರೆ.
ಆಪರೇಷನ್ ಕಮಲ ನಿಲ್ಲಿಸುವ ಬಗ್ಗೆ ಪಕ್ಷೇತರರು, ರೆಬೆಲ್ ಶಾಸಕರಿಗೆ ಯಡಿಯೂರಪ್ಪ ಸಂದೇಶ ರವಾನೆ ಮಾಡಿದ್ದಾರಂತೆ. ಯಡಿಯೂರಪ್ಪ ಅವರ ಈ ನಿರ್ಧಾರ ರೆಬೆಲ್ ಶಾಸಕರು ಹಾಗೂ ಪಕ್ಷೇತರರಿಗೆ ತೀವ್ರ ಬೇಸರ ಮೂಡಿಸಿದೆ. ಈ ಬೆಳವಣಿಗೆ ಬೆನ್ನಲ್ಲೇ ಅತೃಪ್ತ ಶಾಸಕರು ಹಾಗೂ ಇಬ್ಬರು ಪಕ್ಷೇತರ ಶಾಸಕರು ಬೆಂಗಳೂರಿಗೆ ಆಗಮಿಸುವ ನಿರ್ಧಾರಕ್ಕೆ ಬಂದಿದ್ದಾರೆ.
ಈಗಾಗಲೇ ರಮೇಶ್ ಜಾರಕಿಹೊಳಿ, ಪಕ್ಷೇತರ ಶಾಸಕ ಶಂಕರ್, ನಾಗೇಶ್ ರಾಜಧಾನಿಗೆ ಆಗಮಿಸಿದ್ದಾರೆ. ನಾಗೇಂದ್ರ, ಮಹೇಶ್ ಕಮಟಳ್ಳಿ, ಉಮೇಶ್ ಜಾದವ್ ಕೂಡ ಇಂದು ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ.
ಮುಂದಿನ ನಡೆ ಏನು?:
ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷ ಸಿದ್ದರಾಮಯ್ಯ ಅವರು ನಾಲ್ಕು ರೆಬೆಲ್ ಶಾಸಕರನ್ನು ವಜಾ ಮಾಡುವಂತೆ ಸ್ಪೀಕರ್ ರಮೇಶ್ ಕುಮಾರ್ಗೆ ಕೋರಿದ್ದಾರೆ. ಈಗ ಬಿಜೆಪಿ ಕೂಡ ಆಪರೇಷನ್ ಕಮಲ ಡ್ರಾಪ್ ಮಾಡಿರುವುದು ಅತೃಪ್ತರನ್ನು ಇಕ್ಕಟಿಗೆ ಸಿಲುಕಿಸಿದೆ. ಮುಂದಿನ ನಡೆಯ ಬಗ್ಗೆ ರೆಬೆಲ್ ಶಾಸಕರು ಚಿಂತಾಕ್ರಾಂತರಾಗಿದ್ದಾರೆ. ಅನಿವಾರ್ಯವಾಗಿ ಕಾಂಗ್ರೆಸ್ನಲ್ಲೇ ಉಳಿಯಲು ರೆಬೆಲ್ಸ್ ಚಿಂತನೆ ನಡೆಸಿದ್ದಾರೆ ಎಂಬುದು ಮೂಲಗಳ ಮಾಹಿತಿ.
ರಮೇಶ್-ಮಹೇಶ್ ತಡರಾತ್ರಿ ಭೇಟಿ:
ರಮೇಶ್ ಜಾರಕಿಹೊಳಿ ಅವರನ್ನು ಮಹೇಶ್ ಕುಮಟಹಳ್ಳಿ ತಡರಾತ್ರಿ ಭೇಟಿ ಮಾಡಿದ್ದಾರೆ. ಈ ವೇಳೆ ಅವರು ಮುಂದಿನ ನಡೆ ಬಗ್ಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ತಡರಾತ್ರಿವರೆಗೂ ಇಬ್ಬರೂ, ವಸಂತ ನಗರದಲ್ಲಿರುವ ಸರ್ಕಾರಿ ನಿವಾಸದಲ್ಲಿ ಚರ್ಚೆ ನಡೆಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ