ಶ್ರೀನಗರ : ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೊರ ಪ್ರದೇಶದಲ್ಲಿ ಉಗ್ರರು ನಡೆಸಿದ ಭೀಕರ ಬಾಂಬ್ ದಾಳಿಯಲ್ಲಿ 40 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ನಲ್ವತ್ತಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ. 20 ವರ್ಷಗಳಲ್ಲಿ ನಡೆದ ದಾಳಿಗಳಲ್ಲಿ ಅತೀ ದೊಡ್ಡ ದಾಳಿ ಇದಾಗಿದೆ.
ಸ್ಕ್ರಾರ್ಪಿಯೋ ಕಾರಿನಲ್ಲಿ ಬಂದ ಆತ್ಮಾಹುತಿ ಉಗ್ರ ಸುಮಾರು 350 ಕೆ.ಜಿ.ಯ ಸುಧಾರಿತ ಸ್ಫೋಟಕವನ್ನು ಸಿಆರ್ಪಿಎಫ್ ಯೋಧರು ಇದ್ದ ಸ್ಥಳದಲ್ಲಿ ಸ್ಫೋಟಿಸಿದ್ದಾನೆ. 2001ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯಲ್ಲಿ ನಡೆದ ಕಾರ್ ಬಾಂಬ್ ಸ್ಫೋಟದ ನಂತರ ನಡೆದ ಅತ್ಯಂತ ಕೆಟ್ಟ ದಾಳಿ ಇದಾಗಿದೆ. ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಈ ದಾಳಿಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ.
ಸ್ಕ್ರಾರ್ಪಿಯೋ ಕಾರಿನಲ್ಲಿ ಬಂದ ಆತ್ಮಾಹುತಿ ಉಗ್ರ ಸುಮಾರು 350 ಕೆ.ಜಿ.ಯ ಸುಧಾರಿತ ಸ್ಫೋಟಕವನ್ನು ಸಿಆರ್ಪಿಎಫ್ ಯೋಧರು ಇದ್ದ ಸ್ಥಳದಲ್ಲಿ ಸ್ಫೋಟಿಸಿದ್ದಾನೆ. 2001ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯಲ್ಲಿ ನಡೆದ ಕಾರ್ ಬಾಂಬ್ ಸ್ಫೋಟದ ನಂತರ ನಡೆದ ಅತ್ಯಂತ ಕೆಟ್ಟ ದಾಳಿ ಇದಾಗಿದೆ. ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಈ ದಾಳಿಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ.
ಕಾರನ್ನು ಓಡಿಸಿಕೊಂಡು ಬಂದ ವ್ಯಕ್ತಿ 55 ಜನರ ಕೂರಬಹುದಾದ ಸಿಆರ್ಪಿಎಫ್ ಬಸ್ ಬಳಿ ಸ್ಫೋಟಿಸಿದ ಎಂದು ಪುಲ್ವಾಮ ಜಿಲ್ಲೆಯ ಸ್ಥಳೀಯರಾದ ಅಹಮದ್ ಅಲಿಯಾಸ್ ವಾಕ್ವರ್ ಹೇಳುತ್ತಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ದಾಳಿ ನಡೆದ ನಂತರ ಜಮ್ಮುವಿನಿಂದ ಶ್ರೀನಗರದ ಕಡೆ ಬಂದೂಕು ಮತ್ತು ಗ್ರನೈಡ್ ಸ್ಫೋಟದ ಶಬ್ದ ಕೇಳಿಬಂದಿದೆ.
ಈ ಮುನ್ನ 2004ರಲ್ಲಿ 28 ಬಿಎಸ್ಎಫ್ ಯೋಧರು ಹಾಗೂ 2016 ರಲ್ಲಿ 19 ಯೋಧರು ಹಾಗೂ ಹುತಾತ್ಮರಾಗಿದ್ದರು ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ