ಮಸ್ಕತ್: ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ಇದರ ಅಧೀನದ ಸೀಬ್ ಝೋನ್ ವತಿಯಿಂದ ಕೆ.ಸಿಎಫ್ ಡೇ ಹಾಗೂ ಝೋನ್ ಮಟ್ಟದ ಸದಸ್ಯತ್ವ ಅಭಿಯಾನದ ತರಬೇತಿ ಕಾರ್ಯಗಾರವು ಬರ್ಕ ಅಲ್ ಫಲಾಹ್ ಮದ್ರಸದಲ್ಲಿ ಝೋನ್ ಅಧ್ಯಕ್ಷರಾದ ಅಬ್ದುಲ್ ಖಾದರ್ ಹೆಚ್.ಕಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಸಯ್ಯದ್ ಆಬಿದ್ ಅಲ್ ಹೈದ್ರೋಸ್ ತಂಙಳ್ ಎಮ್ಮೆಮ್ಮಾಡು ದುಆಃ ಗೈದರು.
ಕೆ.ಸಿ.ಎಫ್ ಅಂತರಾಷ್ಟ್ರೀಯ ಸಮಿತಿಯ ಸಂಘಟನಾ ವಿಭಾಗದ ಕಾರ್ಯದರ್ಶಿ ಇಕ್ಬಾಲ್ ಬರಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವಿಷಯ ಮಂಡಿಸಿ ಮಾತನಾಡಿದ ಕೆ.ಸಿ.ಎಫ್ ಅಂತರಾಷ್ಟ್ರೀಯ ಆಡಳಿತ ವಿಭಾಗದ ಅಧ್ಯಕ್ಷರಾದ ಉಮರ್ ಸಖಾಫಿ ಮಿತ್ತೂರು ಸಂಘಟನೆಯ ಹುಟ್ಟು, ಬೆಳವಣಿಗೆ, ಅನಿವಾರ್ಯತೆಯ ಕುರಿತು ಸವಿಸ್ತಾರವಾಗಿ ವಿವರಿಸಿ, ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದರು. ಸೀಬ್ ಝೋನ್ ಉಸ್ತುವಾರಿ ಹಾರಿಸ್ ಕೊಳಕೇರಿ ಸದಸ್ಯತ್ವ ಅಭಿಯಾನದ ರೂಪು ರೇಷೆಗಳನ್ನು ವಿವರಿಸಿದರು.
ಸ್ವಾದಿಕ್ ಸುಳ್ಯ ಸ್ವಾಗತಿಸಿ, ಮುನೀರ್ ಮಧ್ಯನಡ್ಕ ವಂದಿಸಿದರು. ಸೀಬ್, ಮಬೇಲಾ, ಬರ್ಕ ಸೆಕ್ಟರ್ ಮತ್ತು ಯುನಿಟ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಕೆ.ಸಿ.ಎಫ್ ಒಮಾನ್ ಸದಸ್ಯತ್ವ ಅಭಿಯಾನ ಫೆಬ್ರವರಿ 8 ರಿಂದ ಮಾರ್ಚ್ 20 ರ ವರೆಗೆ ನಡೆಯಲಿದೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ