ನವದೆಹಲಿ: ಭಯೋತ್ಪಾದನೆ ಮತ್ತು ಉಗ್ರವಾದ ಗಂಭೀರ ಸಮಸ್ಯೆಯಾಗಿದ್ದು, ಇವುಗಳ ವಿರದ್ಧದ ಹೋರಾಟಕ್ಕೆ ಭಾರತ ಹಾಗೂ ಇತರೆ ನೆರೆಯ ರಾಷ್ಟ್ರಗಳಿಗೆ ಸೌದಿ ಅರೇಬಿಯಾ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸೌದಿ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಬುಧವಾರ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ಚರ್ಚೆಯ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪುಲ್ವಾಮಾ ದಾಳಿಯಲ್ಲಿ 40 ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾದ ನಂತರ ಭಾರತ–ಪಾಕಿಸ್ತಾನದ ನಡುವೆ ಉಂಟಾಗಿರುವ ಆತಂಕದ ವಾತಾವರಣ ಹಾಗೂ ಇಸ್ಲಾಮಾಬಾದ್ ಭೇಟಿಯ ಬಳಿಕ ಸೌದಿ ದೊರೆ ಸಲ್ಮಾನ್ ಭಾರತ ಭೇಟಿಯು ಮಹತ್ವ ಪಡೆದಿದೆ.
ಭಾರತದ ಹಲವು ವಲಯಗಳಲ್ಲಿ ಮುಂದಿನ ದಿನಗಳಲ್ಲಿ ₹7.11 ಲಕ್ಷ ಕೋಟಿ ಹೂಡಿಕೆಗೆ ಅವಕಾಶವಿರುವುದು ಕಂಡುಬಂದಿದೆ. 2016ರಿಂದ ಈವರೆಗೂ ಭಾರತದಲ್ಲಿ ಸೌದಿ ಅರೇಬಿಯಾ ₹3.12 ಲಕ್ಷ ಕೋಟಿಯಷ್ಟು ಹೂಡಿಕೆ ಮಾಡಿದೆ. ಪ್ರಮುಖವಾಗಿ ಐಟಿ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ ಮಾಡಲಾಗಿದೆ. ಪೆಟ್ರೋಕೆಮಿಕಲ್ಸ್ ಹಾಗೂ ಸಂಗ್ರಹ ವಲಯದಲ್ಲಿಯೂ ಹೂಡಿಕೆ ವಿಸ್ತರಿಸುವ ಇಚ್ಛೆಯಿದೆ. ಹೂಡಿಕೆಯಿಂದಾಗಿ ಸೌದಿ ಅರೇಬಿಯಾದಲ್ಲಿರುವ ಭಾರತೀಯರು ಹಾಗೂ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೌದಿ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
2016ರಲ್ಲಿ ಪ್ರಧಾನಿ ಮೋದಿ ರಿಯಾದ್ಗೆ ಭೇಟಿ ನೀಡಿದ್ದರು. ವ್ಯಾಪಾರ, ಹೂಡಿಕೆ ಹಾಗೂ ಭಯೋತ್ಪಾದನೆ ವಿರುದ್ಧದ ಹೋರಾಟಗಳ ಕುರಿತು ಉಭಯ ರಾಷ್ಟ್ರಗಳ ಸಹಕಾರದ ಮಾತುಕತೆ ನಡೆದಿತ್ತು. ಇದಾಗಿ ಮೂರು ವರ್ಷಗಳ ಬಳಿಕೆ ಸೌದಿ ದೊರೆ ಭಾರತಕ್ಕೆ ಭೇಟಿ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ