ಮಂಗಳೂರು: ಇಲ್ಲಿನ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ರಾಜ್ಯಪಾಲ ವಜುಭಾಯಿ ವಾಲಾ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು.
132.24 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಪ್ರಸ್ತುತ ಟ್ರಮಿನಲ್ ವಿಸ್ತಾರ 19,509 ಚದರ ಮೀಟರ್ ಇದೆ. ಹೊಸದಾಗಿ 11,343 ಚದರ ಮೀಟರ್ ವಿಸ್ತೀರ್ಣದ ಟರ್ಮಿನಲ್ ನಿರ್ಮಿಸಲಾಗುತ್ತದೆ.
ಈಗ ದಟ್ಟಣೆಯ ಅವಧಿಯಲ್ಲಿ ಪ್ರತಿ ಗಂಟೆಗೆ 730 ಪ್ರಯಾಣಿಕರಿಗೆ ಬೋರ್ಡಿಂಗ್ ಅವಕಾಶ ಕಲ್ಪಿಸುವ ಸಾಮರ್ಥ್ಯ ಇದೆ. ಹೊಸ ಟರ್ಮಿನಲ್ ನಿರ್ಮಾಣದ ಬಳಿಕ ಪ್ರತಿ ಗಂಟೆಗೆ 1,000 ಪ್ರಯಾಣಿಕರಿಗೆ ಬೋರ್ಡಿಂಗ್ಗೆ ಅವಕಾಶ ಕಲ್ಪಿಸುವ ಸಾಮರ್ಥ್ಯ ದೊರಕಲಿದೆ.
ವಾರ್ಷಿಕ ಪ್ರಯಾಣಿಕರ ಸಂಕ್ಯೆ 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಲಿದೆ.
ಅಂತರರಾಷ್ಟ್ರೀಯ ಪ್ರಯಾಣಿಕರ ವಿಭಾಗದಲ್ಲಿ ಎರಡು ಹೊಸ ಬ್ಯಾಗೇಜ್ ಕನ್ವೆಯರ್ ಮತ್ತು ದೇಶೀಯ ಪ್ರಯಾಣಿಕರ ವಿಭಾಗದಲ್ಲಿ ಒಂದು ಹೊಸ ಕನ್ವೆಯರ್ ಅಳವಡಿಸಲಾಗುತ್ತದೆ. ಎರಡು ಹೊಸ ಪ್ರಯಾಣಿಕರ ಬೋರ್ಡಿಂಗ್ ಸೇತುವೆಗಳನ್ನು ನಿರ್ಮಿಸಲಾಗುತ್ತದೆ.
ಪ್ರಯಾಣಿಕರ ವಿಶ್ರಾಂತಿಗೆ ಬೃಹತ್ ಕೊಠಡಿ, ಉಪಾಹಾರ ಗೃಹ, ಪ್ರಯಾಣಿಕರ ಭೇಟಿಗೆ ಸ್ಥಳಾವಕಾಶ, ಪ್ರಥಮ ಚಿಕಿತ್ಸಾ ಕೊಠಡಿಗಳನ್ನು ಈ ಯೋಜನೆಯಲ್ಲಿ ನಿರ್ಮಿಸಲಾಗುತ್ತದೆ.
ದೇಶದ ಎಂಟು ವಿಮಾನ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ವಿಮಾನಯಾನ ಸಚಿವ ಸುರೇಶ್ ಪ್ರಭು ದೆಹಲಿಯಲ್ಲಿ ಚಾಲನೆ ನೀಡಿದರು. ಮಂಗಳೂರಿನಲ್ಲಿ ರಾಜ್ಯಪಾಲರು ಶಂಕುಸ್ಥಾಪನೆ ನೆರವೇರಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಭಾಸ್ಕರ್ ಕೆ., ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ವಿ.ವಿ.ರಾವ್ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್