ಅಬುಧಾಬಿ,ಮಾ.1: ಇಸ್ಲಾಮಿಕ್ ಸಹಕಾರ ಸಂಘಟನೆ(ಒಐಸಿ) ವಿದೇಶಾಂಗ ಸಚಿವರ ಸಮಿತಿಯ 46ನೇ ಶೃಂಗಸಭೆಯಲ್ಲಿ ಭಾಗವಹಿಸುವಂತೆ ಸುಷ್ಮಾ ಸ್ವರಾಜ್ ಅವರಿಗೆ ನೀಡಿದ್ದ ವಿಶೇಷ ಆಹ್ವಾನವನ್ನು ಹಿಂಪಡೆಯಲು ಯುಎಇ ನಿರಾಕರಿಸಿದ ಕಾರಣ, ಪಾಕಿಸ್ತಾನವು ಸಭೆಗೆ ಹಾಜರಾಗದಿರಲು ನಿರ್ಧರಿಸಿದೆ.
ಈ ಸಂಬಂಧ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಮಾತನಾಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ, ‘ವಿದೇಶಾಂಗ ಸಚಿವರ ಸಮಿತಿಯ ಶೃಂಗಸಭೆಯಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಲು ಸುಷ್ಮಾ ಸ್ವರಾಜ್ ಅವರಿಗೆ ವಿಶೇಷ ಆಹ್ವಾನ ನೀಡಿರುವುದರಿಂದಾಗಿ ನಾನು ಆ ಸಭೆಯಲ್ಲಿ ಭಾಗವಹಿಸದಿರಲು ನಿರ್ಧಿರಿಸಿದ್ದೇನೆ’ ಎಂದು ತಿಳಿಸಿದ್ದಾರೆ.
‘ಪಾಕಿಸ್ತಾನವು ಒಐಸಿ ಜೊತೆ ಹೊಂದಿರುವ ನಿಕಟ ಸಂಬಂಧವನ್ನು ಪರಿಗಣಿಸಿ ಶೃಂಗಸಭೆಯನ್ನು ಮುಂದೂಡುವಂತೆ ಮನವಿ ಮಾಡಿಕೊಂಡಿದ್ದೆ. ಅವರು ತಮ್ಮ ಪರಿಸ್ಥಿತಿಯನ್ನು ವಿವರಿಸಿದ್ದರು. ಹಾಗಾಗಿ ಸಭೆಯಲ್ಲಿ ಭಾಗವಹಿಸುವ ತನ್ನ ನಿರ್ಧಾರವನ್ನು ಪಾಕಿಸ್ತಾನ ಮತ್ತೊಮ್ಮೆ ಪರಿಶೀಲಿಸಲಿದೆ ಎಂದು ಫೆಬ್ರುವರಿ 26ರಂದು ಪತ್ರ ಬರೆದಿದ್ದೆ. ನಂತರ ಫೆಬ್ರುವರಿ 28ರಂದು ಸಂಸತ್ತಿನಲ್ಲಿ ವಿರೋಧ ಪಕ್ಷಗಳು ನೀಡಿದ ಸಲಹೆಯ ಮೇರೆಗೆ ನಾನು ಶೃಂಗಸಭೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ’ ಎಂದು ಹೇಳಿದ್ದಾರೆ.
ಸಂಘಟನೆಯ 46ನೇ ಶೃಂಗಸಭೆಯು ಇಂದು ಮತ್ತು ನಾಳೆ ಅಬುಧಾಬಿಯಲ್ಲಿ ನಡೆಯಲಿದ್ದು, ಸುಷ್ಮಾ ಸ್ವರಾಜ್ ಅವರು ಗೌರವ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಈ ಸಂಘದ ಸಭೆಗೆ ಭಾರತವನ್ನು ಆಹ್ವಾನಿಸಿರುವುದು ಇದೇ ಮೊದಲು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು