ಅಬುಧಾಬಿ,ಮಾ.1: ಇಸ್ಲಾಮಿಕ್ ಸಹಕಾರ ಸಂಘಟನೆ(ಒಐಸಿ) ವಿದೇಶಾಂಗ ಸಚಿವರ ಸಮಿತಿಯ 46ನೇ ಶೃಂಗಸಭೆಯಲ್ಲಿ ಭಾಗವಹಿಸುವಂತೆ ಸುಷ್ಮಾ ಸ್ವರಾಜ್ ಅವರಿಗೆ ನೀಡಿದ್ದ ವಿಶೇಷ ಆಹ್ವಾನವನ್ನು ಹಿಂಪಡೆಯಲು ಯುಎಇ ನಿರಾಕರಿಸಿದ ಕಾರಣ, ಪಾಕಿಸ್ತಾನವು ಸಭೆಗೆ ಹಾಜರಾಗದಿರಲು ನಿರ್ಧರಿಸಿದೆ.
ಈ ಸಂಬಂಧ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಮಾತನಾಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ, ‘ವಿದೇಶಾಂಗ ಸಚಿವರ ಸಮಿತಿಯ ಶೃಂಗಸಭೆಯಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಲು ಸುಷ್ಮಾ ಸ್ವರಾಜ್ ಅವರಿಗೆ ವಿಶೇಷ ಆಹ್ವಾನ ನೀಡಿರುವುದರಿಂದಾಗಿ ನಾನು ಆ ಸಭೆಯಲ್ಲಿ ಭಾಗವಹಿಸದಿರಲು ನಿರ್ಧಿರಿಸಿದ್ದೇನೆ’ ಎಂದು ತಿಳಿಸಿದ್ದಾರೆ.
‘ಪಾಕಿಸ್ತಾನವು ಒಐಸಿ ಜೊತೆ ಹೊಂದಿರುವ ನಿಕಟ ಸಂಬಂಧವನ್ನು ಪರಿಗಣಿಸಿ ಶೃಂಗಸಭೆಯನ್ನು ಮುಂದೂಡುವಂತೆ ಮನವಿ ಮಾಡಿಕೊಂಡಿದ್ದೆ. ಅವರು ತಮ್ಮ ಪರಿಸ್ಥಿತಿಯನ್ನು ವಿವರಿಸಿದ್ದರು. ಹಾಗಾಗಿ ಸಭೆಯಲ್ಲಿ ಭಾಗವಹಿಸುವ ತನ್ನ ನಿರ್ಧಾರವನ್ನು ಪಾಕಿಸ್ತಾನ ಮತ್ತೊಮ್ಮೆ ಪರಿಶೀಲಿಸಲಿದೆ ಎಂದು ಫೆಬ್ರುವರಿ 26ರಂದು ಪತ್ರ ಬರೆದಿದ್ದೆ. ನಂತರ ಫೆಬ್ರುವರಿ 28ರಂದು ಸಂಸತ್ತಿನಲ್ಲಿ ವಿರೋಧ ಪಕ್ಷಗಳು ನೀಡಿದ ಸಲಹೆಯ ಮೇರೆಗೆ ನಾನು ಶೃಂಗಸಭೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ’ ಎಂದು ಹೇಳಿದ್ದಾರೆ.
ಸಂಘಟನೆಯ 46ನೇ ಶೃಂಗಸಭೆಯು ಇಂದು ಮತ್ತು ನಾಳೆ ಅಬುಧಾಬಿಯಲ್ಲಿ ನಡೆಯಲಿದ್ದು, ಸುಷ್ಮಾ ಸ್ವರಾಜ್ ಅವರು ಗೌರವ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಈ ಸಂಘದ ಸಭೆಗೆ ಭಾರತವನ್ನು ಆಹ್ವಾನಿಸಿರುವುದು ಇದೇ ಮೊದಲು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ