ನವದೆಹಲಿ: ಭಾರತ ಮತ್ತು ಪಾಕ್ ನಡುವೆ ಕಳೆದ ಎರಡು ದಿನಗಳಿಂದ ಏರ್ಪಟ್ಟಿದ್ದ ವಿಷಮ ಪರಿಸ್ಥಿತಿಯಿಂದಾಗಿ ಸ್ಥಗಿತಗೊಳಿಸಲಾಗಿದ್ದ ಸಂಜೋತಾ ಎಕ್ಸ್ಪ್ರೆಸ್ ರೈಲು ಸೇವೆಗೆ ನಾಳೆ ಮರುಚಾಲನೆ ನೀಡಲಾಗುವುದು ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.
ಪಾಕಿಸ್ತಾನದ ವಶದಲ್ಲಿದ್ದ ಭಾರತೀಯ ವಾಯುಸೇನೆಯ ಪೈಲಟ್ ಅಭಿನಂದನ್ ಅವರನ್ನು ಪಾಕ್ ಬಿಡುಗಡೆ ಮಾಡಿದ ಒಂದು ದಿನದ ನಂತರ ರೈಲ್ವೆ ಇಲಾಖೆ ಈ ಆದೇಶ ಹೊರಡಿಸಿದೆ. ಮೊದಲ ರೈಲು ಭಾರತದಿಂದ ಮಾರ್ಚ್ 3ಕ್ಕೆ ಹೊರಡಲಿದೆ. ಫೆಬ್ರವರಿ 26ರಂದು ಭಾರತ ಪಾಕ್ ಪ್ರದೇಶದ ಮೇಲೆ ವಾಯು ದಾಳಿ ನಡೆಸಿದ ನಂತರ ರೈಲು ಸೇವೆಯನ್ನು ರದ್ದು ಮಾಡಿತ್ತು. ಭಾರತ ಕೂಡ ಫೆಬ್ರವರಿ 28ರಂದು ಸಂಜೋತಾ ಎಕ್ಸ್ಪ್ರೆಸ್ ರೈಲು ಸೇವೆಯನ್ನು ರದ್ದು ಮಾಡಿತ್ತು.
ರೈಲು ಸೇವೆ ನಾಳೆ ಮೊದಲು ಭಾರತ ಕಡೆಯಿಂದಲೇ ಆರಂಭಗೊಳ್ಳಲಿದೆ. ಸೋಮವಾರ ಪಾಕಿಸ್ತಾನದ ರೈಲು ಸೇವೆ ಲಾಹೋರ್ನಿಂದ ಆರಂಭಗೊಳ್ಳಲಿದೆ. ಭಾರತದ ಕಡೆಯ ರೈಲು ದೆಹಲಿಯಿಂದ ಅಟ್ಟಾರಿಗೆ ಹಾಗೂ ಪಾಕಿಸ್ತಾನದ ಕಡೆಯಿಂದ ಲಾಹೋರ್ನಿಂದ ವಾಘಾಗೆ ರೈಲು ಸೇವೆ ಪುನಾರಂಭಗೊಳ್ಳಲಿವೆ. ಲಾಹೋರ್ನಿಂದ ಸೋಮವಾರ ಮತ್ತು ಗುರುವಾರ ರೈಲು ಹೊರಡಲಿದೆ.
1971ರಲ್ಲಿ ಎರಡು ದೇಶಗಳ ನಡುವೆ ನಡೆದ ಶಿಮ್ಲಾ ಒಪ್ಪಂದ ನಂತರ 1976ರ ಜುಲೈ 22ರಂದು ಎರಡು ದೇಶಗಳ ನಡುವೆ ಮೊದಲ ಬಾರಿಗೆ ಸಂಜೋತಾ ಎಕ್ಸ್ಪ್ರೆಸ್ ರೈಲು ಸೇವೆ ಆರಂಭಿಸಲಾಗಿತ್ತು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ