ನವದೆಹಲಿ: ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ ರಹಸ್ಯ ದಾಖಲೆಗಳು ಕಳವಾಗಿವೆ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ.
ರಹಸ್ಯ ದಾಖಲೆಗಳನ್ನು ಬಳಸಿಕೊಂಡು ಅರ್ಜಿದಾರರು ‘ಅಧಿಕೃತ ರಹಸ್ಯ ಕಾಯ್ದೆ’ಯನ್ನು ಉಲ್ಲಂಘಿಸುತ್ತಿದ್ದಾರೆ ಎಂದೂ ಸರ್ಕಾರ ಆರೋಪಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.
‘ರಕ್ಷಣಾ ಇಲಾಖೆಯಿಂದ ಈ ದಾಖಲೆಗಳನ್ನು ಹಾಲಿ ಅಥವಾ ಮಾಜಿ ಉದ್ಯೋಗಿಗಳು ಕಳವು ಮಾಡಿರಬಹುದು. ಈ ದಾಖಲೆಗಳು ತುಂಬಾ ರಹಸ್ಯವಾಗಿರಬೇಕಾದವುಗಳಾಗಿದ್ದು ಸಾರ್ವಜನಿಕರಿಗೆ ಲಭ್ಯವಾಗಬಾರದು’ ಎಂದು ಅಟಾರ್ನಿ ಜನರಲ್ ಅವರು ಕೋರ್ಟ್ಗೆ ತಿಳಿಸಿದರು.
ಈ ವಿಚಾರವಾಗಿ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಪ್ರಶ್ನಿಸಿದರು. ಇದಕ್ಕುತ್ತರಿಸಿದ ಅಟಾರ್ನಿ ಜನರಲ್, ದಾಖಲೆಗಳು ಹೇಗೆ ಕಳವಾಗಿವೆ ಎಂಬ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದರು.
‘ರಹಸ್ಯ ದಾಖಲೆಗಳನ್ನು ಅರ್ಜಿಯ ಜತೆ ಸೇರಿಸಬಾರದು. ಇದು ಅಪರಾಧವಾಗುತ್ತದೆ. ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ ಮರುಪರಿಶೀಲನಾ ಮತ್ತು ಸುಳ್ಳು ಅರ್ಜಿಗಳನ್ನು ವಜಾ ಮಾಡಬೇಕು’ ಎಂದು ಸುಪ್ರೀಂ ಕೋರ್ಟ್ಗೆ ಅಟಾರ್ನಿ ಜನರ್ ಮನವಿ ಮಾಡಿದರು.
ರಫೇಲ್ ಒಪ್ಪಂದಕ್ಕೆ ಸಂಬಂಧಿಸಿ 2018ರ ಡಿಸೆಂಬರ್ 14ರಂದು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಕ್ಲೀನ್ಚಿಟ್ ನೀಡಿತ್ತು. ಈ ತಿರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಕೆಯಾದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ