ದುಬೈ: ಪ್ರಮುಖ ಇಸ್ಲಾಮಿಕ್ ವಿದ್ವಾಂಸ ಮತ್ತು ಸಿರಾಜುಲ್ ಹುದಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯೂ ಆದ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿಯವರ ಉಪನ್ಯಾಸವು ಇಸ್ಲಾಮಿಕ್ ಚಾರಿಟೇಬಲ್ ಆ್ಯಂಡ್ ಅಫೇರ್ಸ್ ಇಲಾಖೆಯ “ಮುಲ್ತಖಾ ರಾಶೀದ್ ಬಿನ್ ಮುಹಮ್ಮದ್” ಕಾರ್ಯಕ್ರಮದಲ್ಲಿ ಶುಕ್ರವಾರ ನಡೆಯಲಿದೆ. ಇಶಾ ಪ್ರಾರ್ಥನೆಯ ಬಳಿಕ ಖಿಸೈಸ್ನ ತವಾರ್ ಸೆಂಟರ್ ನ ಮುಂದುಗಡೆ ಇರುವ ಮುಹಮ್ಮದ್ ಹಸನ್ ಶೈಖ್ನಲ್ಲಿ ಭಾಷಣ ನಡೆಯಲಿದೆ.
ಮುಲ್ತಖಾ ರಾಶಿದ್ ಬಿನ್ ಮುಹಮ್ಮದ್ ಕಾರ್ಯಕ್ರಮ ಎಂಬುದು ದುಬೈ ಧಾರ್ಮಿಕ ವ್ಯವಹಾರಗಳ ಇಲಾಖೆ(ಅವ್ಖಾಫ್) ಯ ವಿಶೇಷ ಕಾರ್ಯಕ್ರಮವಾಗಿದ್ದು, ಇಸ್ಲಾಮಿಕ್ ಉಪನ್ಯಾಸ ನೀಡುವವರ ಪೈಕಿ ಅಗ್ರಗಣ್ಯರಾದ ಪೇರೋಡ್ ಉಸ್ತಾದರು ಭಾರತ ಮತ್ತು ವಿದೇಶಗಳಲ್ಲಿ ಸಾವಿರಾರು ವೇದಿಕೆಗಳಲ್ಲಿ ಪ್ರವಚನ ನೀಡಿದವರಾಗಿದ್ದಾರೆ.
ಹಿಂದಿನ ವರ್ಷಗಳಲ್ಲಿ, ಯುಎಇ ಅಧ್ಯಕ್ಷರ ರಮಝಾನ್ ಅತಿಥಿಯಾಗಿ ಭಾಗವಹಿಸಿದ್ದ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿಯವರು, ದುಬೈ ಅಂತಾರಾಷ್ಟ್ರೀಯ ಪವಿತ್ರ ಖುರ್ಆನ್ ಪ್ರಶಸ್ತಿ ಸಮಿತಿಯ ಪ್ರತಿನಿಧಿಯಾಗಿಯೂ ಭಾಗವಹಿಸಿದ್ದರು.
ಬಸ್ ರೂಟ್:
ದುಬೈ ಆರ್ಟಿಎ ದ 31, 13, 64 ಸಂಖ್ಯೆಯ ಬಸ್ಗಳು ಮತ್ತು ಮೆಟ್ರೋ ಗ್ರೀನ್ ಲೈನ್ನ ಖಿಸೈಸ್ ನಿಲ್ದಾಣದಲ್ಲಿ ಇಳಿಯುವ ಮೂಲಕ ಉಪನ್ಯಾಸ ವೇದಿಕೆಯನ್ನು ತಲುಪಬಹುದಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು