ನವದೆಹಲಿ: ಉದ್ಯೋಗ ಸೃಷ್ಟಿ ವಿಷಯಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಆರೋಪಿಸಿದ್ದಾರೆ.
ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ನಿರುದ್ಯೋಗ ಪ್ರಮಾಣ ಪ್ರಮುಖ ವಿಷಯವಾಗಿರಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಉದ್ಯೋಗ ಸೃಷ್ಟಿ ಮಾಡದೆ ತಪ್ಪೆಸಗಿರುವ ಕೇಂದ್ರದ ಎನ್ಡಿಎ ಸರ್ಕಾರ ಆ ಕುರಿತು ಸುಳ್ಳು ಹೇಳುವ ಮೂಲಕ ಮತ್ತಷ್ಟು ತಪ್ಪು ಮಾಡುತ್ತಿದೆ ಎಂದೂ ಚಿದಂಬರಂ ಟೀಕಿಸಿದ್ದಾರೆ.
ನಿರುದ್ಯೋಗ ಪ್ರಮಾಣಕ್ಕೆ ಸಂಬಂಧಿಸಿ ಮೊದಲಿನಿಂದಲೂ ಪ್ರಧಾನಿ ವಿರುದ್ಧ ಕಾಂಗ್ರೆಸ್ ಟೀಕೆ ಮಾಡುತ್ತಲೇ ಬಂದಿದೆ. ನಿರುದ್ಯೋಗ ಪ್ರಮಾಣ 45 ವರ್ಷಗಳಲ್ಲೇ ಅತಿ ಹೆಚ್ಚು ಪ್ರಮಾಣದಲ್ಲಿ, ಅಂದರೆ ಶೇ 6.1ರಷ್ಟಿದೆ ಎಂದು ಈಚೆಗೆ ನ್ಯಾಷನಲ್ ಸ್ಯಾಂಪಲ್ ಸರ್ವೆ ಆಫೀಸ್ (ಎನ್ಎಸ್ಎಸ್ಒ) ಸಮೀಕ್ಷಾ ವರದಿ ಹೇಳಿತ್ತು. ಇದರ ನಂತರ ಕಾಂಗ್ರೆಸ್ ನಾಯಕರ ವಾಗ್ದಾಳಿ ತೀವ್ರಗೊಂಡಿದೆ.
ಕೃಷಿ, ವಿದೇಶಿ ಹೂಡಿಕೆ, ರಫ್ತು, ಸೂಕ್ಷ್ಮ ಮತ್ತು ಸಣ್ಣ ಉದ್ದಿಮೆಗಳ ಕುಸಿತ, ವಿತ್ತೀಯ ಕೊರತೆ ಹೆಚ್ಚುತ್ತಿರುವುದು ಮತ್ತು ಆರ್ಥಿಕ ಬೆಳವಣಿಗೆ ಕುಂಠಿತವಾಗುತ್ತಿರುವುದರ ಬಗ್ಗೆ ಚಿದಂಬರಂ ಕಳವಳ ವ್ಯಕ್ತಪಡಿಸಿದ್ದಾರೆ.
ರಫ್ತಿಗೆ ಉತ್ತೇಜನ ನೀಡಲು ಸಮಗ್ರ ನೀತಿಯೊಂದನ್ನು ರೂಪಿಸಬೇಕು ಎಂದೂ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ