ಖಮೀಸ್ ಮುಶೈತ್: ಕೆಸಿಎಫ್ ಜಿದ್ದಾ ಝೋನ್ ಅಧೀನದಲ್ಲಿರುವ ಖಮೀಸ್ ಮುಶೈತ್ ಸೆಕ್ಟರ್ ನ ಸ್ವಲಾತ್ ಮಜ್ಲಿಸ್ ಹಾಗೂ ಮಹಾಸಭೆಯು ಸೆಕ್ಟರ್ ಅಧ್ಯಕ್ಷರಾದ ಶರೀಫ್ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ರಶೀದ್ ತೋಟಲ್ ನಿವಾಸದಲ್ಲಿ ಜರಗಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮುಹಿಮ್ಮಾತ್ ಸಂಸ್ಥೆಯ ಪ್ರಧಾನ ಮುದರ್ರಿಸರಾದ ಅಬ್ದುಲ್ ಅಝೀಝ್ ಮಿಸ್ಬಾಹಿ ಈಶ್ವರಮಂಗಳ ಸ್ವಲಾತ್ ಗೆ ನೇತೃತ್ವ ಮತ್ತು ಸಂಘಟನೆಯ ಅವಶ್ಯಕತೆಯ ಬಗ್ಗೆ ವಿವರಣೆಯನ್ನು ನೀಡಿದರು.

ಈ ವೇಳೆ ಮುಹಿಮ್ಮಾತ್ ಸಂಸ್ಥೆಯ ಮುದರ್ರಿಸರಾದ ಅಬ್ದುಲ್ ಅಝೀಝ್ ಮಿಸ್ಬಾಹಿ ಹಾಗೂ ಭೇಷ್ ಸೆಕ್ಟರ್ ಅಧ್ಯಕ್ಷರಾದ CH ಅಬ್ದುಲ್ಲಾ ಸಖಾಫಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಲಾಯಿತು.
ಸೆಕ್ಟರ್ ಅಧ್ಯಕ್ಷರು ಶರೀಫ್ ಉಸ್ತಾದ್ ವರದಿ ಹಾಗೂ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ರಝಾಕ್ ವಿಟ್ಲ ಲೆಕ್ಕ ಪತ್ರವನ್ನು ಮಂಡಿಸಿದರು. ರೀ-ಓರ್ಗನೈಸಿಂಗ್ ಆಫೀಸರಾಗಿ ಆಗಮಿಸಿದ ಝೋನಲ್ ನಾಯಕರಾದ CH ಅಬ್ದುಲ್ಲಾ ಸಖಾಫಿ ಕಳಂಜಿಬೈಲ್ ರವರು ಹಳೆಯ ಸಮಿತಿಯನ್ನು ವಿಸರ್ಜಿಸಿ ಹೊಸ ಸಮಿತಿಯನ್ನು ಆಯ್ಕೆ ಮಾಡಿದರು.

ಅಧ್ಯಕ್ಷರಾಗಿ ಅಬ್ದುಲ್ ರಝಾಖ್ ಬನ್ನೂರ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ ವಿಟ್ಲ, ಕೋಶಾಧಿಕಾರಿಯಾಗಿ ಆದಿಲ್ ಅನ್ಸಾರ್ ಮೂಡಬಿದ್ರೆ ನೆಮಕಗೊಂಡರು.
ಸಂಘಟನಾ ಇಲಾಖೆ ಅಧ್ಯಕ್ಷರು: ಇಬ್ರಾಹಿಂ ದೇರಳಕಟ್ಟೆ, ಕಾರ್ಯದರ್ಶಿ: ಶರೀಫ್ ಉಸ್ತಾದ್ ವಿಟ್ಲ,
ಶಿಕ್ಷಣ ಇಲಾಖೆ ಅಧ್ಯಕ್ಷರು: ಉಮರ್ ವಿಟ್ಲ, ಕಾರ್ಯದರ್ಶಿ: ಅನ್ವರ್ ಕಕ್ಕೆಪದವು.
ಸಾಂತ್ವನ ಇಲಾಖೆ ಅಧ್ಯಕ್ಷರು: ರಶೀದ್ ತೋಟಲ್, ಕಾರ್ಯದರ್ಶಿ: ಅನ್ಸಾಫ್ ಉಳ್ಳಾಲ.
ಪ್ರಕಾಶನ ಇಲಾಖೆ ಅಧ್ಯಕ್ಷರು: ಖಾಲಿದ್ ಕಬಕ, ಕಾರ್ಯದರ್ಶಿ:ರಿಯಾಝ್ ಮಂಜನಾಡಿ.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಶ್ರಫ್ ತಂಙಳ್, ಆಸೀಫ್ ತುರ್ಕಳಿಕೆ, ಸಿದ್ದಿಕ್ ತುರ್ಕಳಿಕೆ, ಜಮಾಲ್ ಕೆ ಸಿ ರೋಡ್, ಸಫ್ವಾನ್ ಉಳ್ಳಾಲ, ಮುಸ್ತಫಾ ಫರಂಗಿಪೇಟೆ, ಅಬೂಬಕರ್ ಪುರುಷರಕಟ್ಟೆ, ನಿಯಾಜ್ ವೇಣೂರ್, ಹನೀಫ್ ಹಿಮಮಿ, ನಝೀರ್ ಮಡಿಕೇರಿ ಒಳಗೊಂಡ ಇಪ್ಪತ್ತು ಸದಸ್ಯರನ್ನು ಕಾರ್ಯಕಾರಿಣಿ ಸಮಿತಿಗೆ ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕೆಸಿಎಫ್ ಭೇಶ್ ಸೆಕ್ಟರ್ ನಾಯಕರಾದ ಆಸಿಫ್ ಕ್ರಷ್ಣಾಪುರ, ಸಿರಾಜುದ್ದೀನ್ ತೆಕ್ಕಾರ್ ಮತ್ತು ಸಲೀಂ ತೆಕ್ಕಾರ್ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶರೀಫ್ ವಿಟ್ಲ ಸ್ವಾಗತಿಸಿ, ನೂತನ ಅಧ್ಯಕ್ಷರಾದ ರಝಾಕ್ ಬನ್ನೂರ್ ಧನ್ಯವಾದಗೈದರು.
ವರದಿ:ಅಬ್ದುಲ್ ರಝಾಕ್ ವಿಟ್ಲ















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ