ಮುಂಬೈ: ಭಾರತದಲ್ಲಿ ಕತರ್ನ ಎರಡನೇ ವೀಸಾ ಸೆಂಟರ್ ಮುಂಬೈನಲ್ಲಿ ಕಾರ್ಯಾರಂಭಿಸಿದೆ. ಎರಡೂ ದೇಶಗಳ ಉನ್ನತ ರಾಜತಾಂತ್ರಿಕ ವ್ಯಕ್ತಿಗಳ ಉಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭ ಜರುಗಿತು. ಇದು ಭಾರತದಲ್ಲಿ, ಕತಾರ್ ಸ್ಥಾಪಿಸಲು ಉದ್ದೇಶಿಸಿರುವ ಏಳು ವೀಸಾ ಸೇವೆ ಕೇಂದ್ರಗಳ ಪೈಕಿ ಎರಡನೇ ಕೇಂದ್ರವಾಗಿದೆ.
ಭಾರತದಲ್ಲಿನ ಖತರ್ ಕೌನ್ಸಿಲ್ ಜನರಲ್ ಸೈಫ್ ಬಿನ್ ಅಲಿ ಅಲ್ ಮುಹನ್ನದಿ ಮತ್ತು ಕತಾರ್ ವೀಸಾ ಸಪೋರ್ಟ್ ಸರ್ವೀಸ್ ಇಲಾಖೆಯ ನಿರ್ದೇಶಕ ಮೇಜರ್ ಅಬ್ದುಲ್ಲಾ ಅಲ್ ಖಲೀಫಾ ಮುಹನ್ನದಿ ಜಂಟಿಯಾಗಿ ಉದ್ಘಾಟಿಸಿದರು. ಭಾರತೀಯ ವಿದೇಶಾಂಗ ಸಚಿವಾಲಯದ ಪ್ರತಿನಿಧಿಗಳೂ ಉಪಸ್ಥಿತರಿದ್ದರು.
ಚೆನ್ನೈ, ಹೈದರಾಬಾದ್, ಕೊಚ್ಚಿ, ಲಕ್ನೋ, ಕೋಲ್ಕತ್ತಾದಲ್ಲೂ ಮುಂದಿನ ತಿಂಗಳಿನಿಂದ ಕೇಂದ್ರಗಳು ಆರಂಭವಾಗಲಿವೆ. ಕತಾರ್ ಉದ್ಯೋಗ ಹುಡುಕುವವರು ಮತ್ತು ಕಂಪನಿಗಳಿಗೆ ಆರಾಮದಾಯಕವಾದ ರೀತಿಯಲ್ಲಿ ವೀಸಾ ಸೇವಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ.
ಕಾರ್ಯವಿಧಾನಗಳನ್ನು ಸುಲಭಗೊಳಿಸುವ ಮತ್ತು ವೀಸಾ ವಂಚನೆಗಳನ್ನು ತಡೆಯುವ ಉದ್ದೇಶಕ್ಕಾಗಿ ಕಳೆದ ವರ್ಷ, ಕತಾರ್ ವೀಸಾ ಕೇಂದ್ರಗಳನ್ನು ಘೋಷಿಸಿತು. ಶ್ರೀಲಂಕಾದ ರಾಜಧಾನಿ ಕೊಲಂಬೊದಲ್ಲಿ ಅಕ್ಟೋಬರ್ ನಲ್ಲಿ ಮೊದಲ ಕೇಂದ್ರ ಪ್ರಾರಂಭಗೊಂಡಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ