ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ವಿವಿಪ್ಯಾಟ್ ಎಣಿಕೆ ಕುರಿತು ಚುನವಣಾ ಆಯೋಗ ಸಲ್ಲಿಸಿರುವ ಅಫಿಡವಿಟ್ ಗೆ ಒಂದು ವಾರದಲ್ಲಿ ಪ್ರತಿಕ್ರಿಯೆ ನೀಡಬೇಕೆಂದು 21 ಪ್ರತಿಪಕ್ಷ ನಾಯಕರಿಗೆ ಸುಪ್ರೀಂ ಕೋರ್ಟ್ ಹೇಳಿದೆ.
ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಪ್ರತಿಪಕ್ಷಗಳ ಮೈತ್ರಿಕೂಟ ಮುಂಬರುವ ಲೋಕಸಭೆ ಚುನಾವಣೆಯ ಮತಎಣಿಕೆ ವೇಳೆ ಪ್ರತಿ ಅಸೆಂಬ್ಲಿ ಕ್ಷೇತ್ರದ ಕನಿಷ್ಠ 50 ಪ್ರತಿಶತದಷ್ಟು ವಿವಿಪ್ಯಾಟ್ ಗಳನ್ನು ಎಣಿಕೆ ಮಾಡಬೇಕು ಎಂದು ಕೋರ್ಟ್ ಗೆ ಮನವಿ ಸಲ್ಲಿಸಿದ್ದವು. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠವು ಮುಂದಿನ ಸೋಮವಾರದೊಳಗೆ ಆಯೋಗದ ಅಫಿಡವಿಟ್ ಗೆ ಪ್ರತ್ಯುತ್ತರ ಸಲ್ಲಿಸಬೇಕು ಎಂದು ಪ್ರತಿಪಕ್ಷ ನಾಯಕರ ಪರ ವಕೀಲ ಎ. ಎಂ. ಸಿಂಘ್ವಿ ಅವರಿಗೆ ಆದೇಶಿಸಿದೆ.ಇದಕ್ಕೆ ಮುನ್ನ ಅಫಿಡವಿಟ್ ಸಲ್ಲಿಸಿದ್ದ ಚುನಾವಣಾ ಆಯೋಗ ಶುಕ್ರವಾರ ಪ್ರತಿಪಕ್ಷ ನಾಯಕರ ಮನವಿಯನ್ನು ವಜಾ ಮಾಡಲು ಕೇಳಿತ್ತು.
ಪ್ರತಿವಾದಿಗಳು ವಿವಿಪ್ಯಾಟ್ ಎಣಿಕೆ ಹೆಚ್ಚಳ ಮಾಡಲು ಕೇಳುತ್ತಿದ್ದಾರೆ. ಆದರೆ ಪ್ರತಿ ಮತಗಟ್ಟೆಯ ಶೇ. 50ರಷ್ಟು ವಿವಿಪ್ಯಾಟ್ ಎಣಿಕೆ ಮಾಡಬೇಕಾದರೆ ಅದಕ್ಕೆ ಆರು ವಾರಗಳ ಕಾಲಾವಧಿ ಹಿಡಿಯಲಿದೆ. ಅಲ್ಲದೆ ಪ್ರತಿವಾದಿಗಳು ವಿವಿಪ್ಯಾಟ್ ಎಣಿಕೆ ಬಗ್ಗೆ ಕೇಳುತ್ತಿದ್ದು ಇದಕ್ಕೆ ಅವರು ಯಾವುದೇ ಬಲವಾದ ಕಾರಣ ನೀಡುವಲ್ಲಿ ಅಸಮರ್ಥರಾಗಿದ್ದಾರೆ. ಎಂದು ಆಯೋಗ ತನ್ನ ಅಫಿಡವಿಟ್ ನಲ್ಲಿ ಹೇಳೀದೆ. ಸಾಕಷ್ಟು ಪರೀಕ್ಷೆಗಳ ನಂತರ ಈ ವ್ಯವಸ್ಥೆ ಜಾರಿಗೆ ಬಂದಿದ್ದು ಇವಿಎಂ ಮೂಲಕ ಮತದಾನ, ವಿವಿಪ್ಯಾಟ್ ಬಳಕೆ ಅತ್ಯಂತ ಸೂಕ್ತ ಕ್ರಮವಾಗಿದೆ, ಇದರಲ್ಲಿ ಯಾವ ವಂಚನೆ ನಡೆಯುವುದಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ