ವಯನಾಡ್ (ಕೇರಳ): ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬೃಹತ್ ರೋಡ್ ಶೋ ವೇಳೆ ಗಾಯಗೊಂಡ ಪತ್ರಕರ್ತರನ್ನು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಉಪಚರಿಸಿ, ಕಾರ್ಯಕ್ರಮದ ಸ್ಥಳದಿಂದ ಆ್ಯಂಬುಲೆನ್ಸ್ವರೆಗೂ ತಾವೇ ಸ್ವತಃ ಕರೆತರುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ರಾಹುಲ್ ಗಾಂಧಿ ಅವರು ಇಂದು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದರು. ನಾಮಪತ್ರ ಸಲ್ಲಿಕೆ ಬಳಿಕ ವಯನಾಡ್ನಲ್ಲಿ ಬೃಹತ್ ರೋಡ್ ಶೋ ಆಯೋಜಿಸಿದ್ದರು. ಈ ಎಲ್ಲ ಕಾರ್ಯಕ್ರಮಗಳನ್ನು ವರದಿ ಮಾಡಲು ತೆರಳಿದ್ದ ಪತ್ರಕರ್ತರಲ್ಲಿ ಮೂವರು ಗಾಯಗೊಂಡು ಕುಸಿದುಬಿದ್ದರು. ಇದನ್ನು ನೋಡಿದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸ್ವತಃ ತಾವೇ ವಾಹನದಿಂದ ಕೆಳಗೆ ಇಳಿದು, ಗಾಯಗೊಂಡ ಪತ್ರಕರ್ತರನ್ನು ಸ್ಟ್ರಚ್ಚರ್ ಮೇಲೆ ಮಲಗಿಸಿ, ಆ್ಯಂಬುಲೆನ್ಸ್ವರೆಗೂ ಕರೆತಂದರು. ನಂತರ ಗಾಯಾಳು ಪತ್ರಕರ್ತರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆಗಾಗಿ ರಾಹುಲ್ ಗಾಂಧಿ ತಮ್ಮ ತಂಗಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಹೆಲಿಕಾಪ್ಟರ್ನಲ್ಲಿ ಇಂದು ಬೆಳಗ್ಗೆ ಕೇರಳಕ್ಕೆ ಆಗಮಿಸಿದ್ದರು. ನಾಮಪತ್ರ ಸಲ್ಲಿಸಿದ ಬಳಿಕ ಸಾವಿರಾರು ಮಂದಿ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ನಡೆಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ