ಮದೀನಾ : ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯರಿಬ್ಬರು ಮೃತಪಟ್ಟ ಘಟನೆ ಎಪ್ರಿಲ್ 6ರಂದು ನಡೆದಿದೆ. ಮದೀನಾ ಮುನವ್ವರಕ್ಕೆ 80 ಕಿ.ಮಿ ಸಮೀಪ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರನ್ನು ಕರ್ನಾಟಕ, ಹಾಸನದ ಅಬ್ದುಲ್ ಜಾವೀದ್ ಹಾಗೂ ಉತ್ತರ ಪ್ರದೇಶದ ಇರ್ಫಾನ್ ಎಂದು ಗುರುತಿಸಲಾಗಿದೆ.

ಅಪಘಾತ ಮಾಹಿತಿ ಅರಿತ ಕರ್ನಾಟಕ ಕಲ್ಚರಲ್ ಫೌಂಡೇಶನ್ ಕಾರ್ಯಕರ್ತರು ಮೃತರ ದಫನ ಕಾರ್ಯಕ್ಕೆ ಬೇಕಾದ ಅಗತ್ಯ ದಾಖಲೆಗಳನ್ನು ಕಲೆಹಾಕಿದರು. ಮೃತರ ಸಂಬಂಧಿಕರ ಮೂಲಕ ಸೌದಿ ಅರೇಬಿಯಾದ ಪೊಲೀಸ್ ಇಲಾಖೆ, ಆಸ್ಪತ್ರೆ ಗಳ ದಾಖಲೆಗಳನ್ನು ಸಂಗ್ರಹಿಸಿದರು. ನಂತರ ಇಂಡಿಯನ್ ಎಂಬಾಸಿಯ NOCಗೆ ಬೇಕಾದ ಅಗತ್ಯ ದಾಖಲೆಗಳನ್ನು ಸರಿಪಡಿಸಿದರು.
ಜಾವೀದ್ ಅಂತ್ಯ ಸಂಸ್ಕಾರವನ್ನು ಸೋಮವಾರ ಇಶಾ ನಮಾಜಿನ ಬಳಿಕ ಹಾಗೂ ಇರ್ಫಾನ್ ಅವರ ಅಂತ್ಯ ಸಂಸ್ಕಾರವು ಮಂಗಳವಾರ ಲುಹ್ರ್ ನಮಾಜಿನ ಬಳಿಕ ಮದೀನಾ ಮುನವ್ವರದ ಜನ್ನತುಲ್ ಬಖೀದಲ್ಲಿ ನೆರವೇರಿಸಲಾಯಿತು. ಈ ವೇಳೆ ಮೃತರ ಸಂಬಂಧಿಕರು ಹಾಗೂ ಕೆಸಿಎಫ್ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಹಕೀಂ ಬೋಳಾರ್















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ: ವಾಹನಕ್ಕೆ ಆಕಸ್ಮಿಕ ಬೆಂಕಿ – ಯುವಕನಿಗೆ ದಾರುಣ ಅಂತ್ಯ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ