ನವದೆಹಲಿ: ಸ್ಮೃತಿ ಇರಾನಿ ಚುನಾವಣಾ ಆಯೋಗಕ್ಕೆ ಶಿಕ್ಷಣ ಅರ್ಹತೆ ವಿಚಾರವಾಗಿ ಸುಳ್ಳು ಮಾಹಿತಿ ನೀಡಿದ್ದಾರೆಂದು ಕಾಂಗ್ರೆಸ್ ಈಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಶುಕ್ರವಾರಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ಸ್ಮೃತಿ ಇರಾನಿ ಅವರ ಉದ್ದೇಶಪೂರ್ವಕ ತಪ್ಪುಗಳ ವಿರುದ್ಧ ತುರ್ತು ಹಸ್ತಕ್ಷೇಪ ಕೋರಿ ಆಗ್ರಹಿಸಲಾಗಿದೆ.ಅಲ್ಲದೆ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಗುರುವಾರದಂದು ಸ್ಮೃತಿ ಇರಾನಿ ಅವರು ಅಮೇಥಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ತಮ್ಮ ಶಾಲಾ ಶಿಕ್ಷಣ ಮುಗಿದ ನಂತರ ದೆಹಲಿ ವಿಶ್ವವಿದ್ಯಾನಿಲಯದ ಓಪನ್ ಕಲಿಕೆ ಶಾಲೆಯಲ್ಲಿ ಬ್ಯಾಚುಲರ್ ಆಫ್ ಕಾಮರ್ಸ್ ಪದವಿಗೆ ಸೇರಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ.ಆದರೆ ಪದವಿಯನ್ನು ಪೂರ್ಣಗೊಳಿಸಿಲ್ಲವೆಂದು ಘೋಷಿಸಿಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ನೀಡಿರುವ ದೂರಿನಲ್ಲಿ ಸ್ಮೃತಿ ಇರಾನಿಯವರ ಈ ಹಿಂದಿನ ಅಫಿದಾವಿತ್ತನಲ್ಲಿ 2004, 2011, 2014 ಮತ್ತು 2017 ರ ಲೋಕಸಭೆ ಮತ್ತು ರಾಜ್ಯಸಭಾ ಚುನಾವಣೆಗಳಿಗೆ ಸಲ್ಲಿಸಿದ ಮಾಹಿತಿಗಳು ಭಿನ್ನವಾಗಿವೆ.ಆದ್ದರಿಂದ ಅವರು ಸುಳ್ಳು ದಾಖಲೆಗಳನ್ನು ನೀಡಿ 1950 ರ ಜನಪ್ರತಿನಿಧಿ ಕಾಯಿದೆಯ ವಿಭಾಗ 33 ನ್ನು ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಅದು ಉಲ್ಲೇಖಿಸಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ