ಕೆಸಿಎಫ್ ಒಮಾನ್ ಇದರ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಸಲಾಲ ಝೋನ್ ಇದರ ಮಹಾಸಭೆಯು ಇತ್ತೀಚೆಗೆ ಅಬ್ದುಲ್ ಲತೀಫ್ ಸಿ.ಎ. ಸುಳ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
KCF ಒಮಾನ್ ರಾಷ್ಟ್ರೀಯಧ್ಯಕ್ಷರಾದ ಸಯ್ಯದ್ ಆಬಿದ್ ಅಲ್ ಹೈದ್ರೋಸಿ ತಂಙಳ್ ರವರು ಉಧ್ಘಾಟಿಸಿದ ಕಾರ್ಯಕ್ರಮದಲ್ಲಿ ಸಯ್ಯದ್ ಮಹಮ್ಮದ್ ತಂಙಳ್ ಮಂಜೇಶ್ವರ ಅವರುಗಳು ದುಆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟೀಯಧ್ಯಕ್ಷರಾದ ಸಯ್ಯದ್ ಆಬಿದ್ ಅಲ್ ಹೈದ್ರೋಸಿ ತಂಙಳ್, ಪ್ರಧಾನ ಕಾರ್ಯದರ್ಶಿ ಹನೀಫ್ ಸಅದಿ, ಸಂಘಟನಾಧ್ಯಕ್ಷರಾದ ಹಂಝ ಕನ್ನಂಗಾರ್,ಕಾಸಿಂ ಪೊಯ್ಯತ್ತಬೈಲ್ ಹಾಗೂ ಝೋನ್ ನಾಯಕರುಗಳು ಉಪಸ್ಥಿತರಿದ್ದರು.
ನಂತರ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಅಬ್ದುಲ್ ಲತೀಫ್ ಸಿ ಎ ಸುಳ್ಯ, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಇಬ್ರಾಹೀಂ ನಂದಾವರ, ಕೋಶಾಧಿಕಾರಿಯಾಗಿ ಬಶೀರ್ ಅಡ್ಕಾರ್, ಎಜುಕೇಷನ್ ವಿಭಾಗದ ಅಧ್ಯಕ್ಷರಾಗಿ ಖಲಂದರ್ ಶಾಫಿ, ಸಂಘಟನಾಧ್ಯಕ್ಷರಾಗಿ ಅಬ್ದುಲ್ ಕಯ್ಯೂಂ ಅಡ್ಕಾರ್, ಆಡಳಿತ ವಿಭಾಗದ ಅಧ್ಯಕ್ಷರಾಗಿ ಅಶ್ರಫ್ ಪಡುಬಿದ್ರೆ, ಸಾಂತ್ವನ ವಿಭಾಗದ ಅಧ್ಯಕ್ಷರಾಗಿ ಅಬ್ದುಲ್ ಕಾದರ್ ಸುಳ್ಯ, ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಬೀರ್ ಸುಳ್ಯ, ಇಹ್ಸಾನ್ ಇದರ ಅಧ್ಯಕ್ಷರಾಗಿ ಕಮಾಲ್ ಸುಳ್ಯ ಹಾಗೂ ಸದಸ್ಯರುಗಳಾಗಿ ಸ್ವದಕತುಲ್ಲಾ ಕಳಸ,ಫಾರಿಸ್ ಕೊಡಗು,ರಹೀಂ ಕೊಳ್ಕೇರಿ,ಅಬ್ದುಲ್ ಮಜೀದ್ ಕೊಡಗು,ಹನೀಫ್ ಸುಳ್ಯ,ನಾಸಿರ್ ಪಡುಬಿದ್ರಿ, ಅಬ್ದುಲ್ ಹಮೀದ್ ಮಂಜೇಶ್ವರ, ಅಶ್ರಫ್ ಉಳ್ಳಾಲ, ಹೈದರ್ ಸಜಿಪ,ಸಿದ್ದೀಕ್ ತ್ವೈಬಾ ಇವರುಗಳನ್ನು ಆರಿಸಲಾಯಿತು.
ಶಾಫಿ ಮುಸ್ಲಿಯಾರ್ ಸ್ವಾಗತಿಸಿದ ಕಾರ್ಯಕ್ರಮವನ್ನು ನೂತನ ಕಾರ್ಯದರ್ಶಿ ನಾಸಿರ್ ನಂದಾವರ ವಂಧಿಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ