ನವದೆಹಲಿ: ಈಗ ದೇಶದಲ್ಲೆಡೆ ಲೋಕಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ವಿಶ್ವ ಪತ್ರಿಕಾ ಸ್ವಾತಂತ್ರ ಸೂಚಂಕ್ಯ ಬಿಡುಗಡೆಯಾಗಿದೆ. ಆದರೆ ಭಾರತ ಈಗ ಸೂಚ್ಯಂಕದಲ್ಲಿ ಕುಸಿತ ಕಂಡಿರುವುದು ನಿಜಕ್ಕೂ ಕಳವಳಕಾರಿ ಸಂಗತಿಯಾಗಿದೆ.
ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ ಎನ್ನುವ ಸಂಸ್ಥೆ ಬಿಡುಗಡೆ ಮಾಡಿರುವ ಸೂಚ್ಯಂಕದಲ್ಲಿ ಒಟ್ಟು 180 ದೇಶಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಇದರಲ್ಲಿ ನಾರ್ವೆ ದೇಶವು ಈ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದಿದೆ.ಭಾರತ 140ನೇ ಸ್ಥಾನಕ್ಕೆ ಕುಸಿತ ಕಂಡಿದೆ. ಆ ಮೂಲಕ ಭಾರತದಲ್ಲಿನ ಪತ್ರಿಕಾ ಸ್ವಾತಂತ್ರ ಗಣನೀಯ ಪ್ರಮಾಣದಲ್ಲಿ ಕುಸಿದಿರುವುದು ಈಗ ಆತಂಕಕ್ಕೆ ಕಾರಣವಾಗಿದೆ.ಭಾರತದಲ್ಲಿ ಪತ್ರಕರ್ತರ ಮೇಲೆ ಹೆಚ್ಚುತ್ತಿರುವ ದಾಳಿಯಿಂದಾಗಿ ಕಳೆದ ವರ್ಷ 6 ಪತ್ರಕರ್ತರು ಮೃತಪಟ್ಟಿದ್ದರು.ಈ ಹಿನ್ನಲೆಯಲ್ಲಿ ಭಾರತ ಸೂಚ್ಯಂಕದಲ್ಲಿ ಕುಸಿದಿದೆ ಎನ್ನಲಾಗಿದೆ.
ವಿಶ್ವ ಪತ್ರಿಕಾ ಸ್ವಾತಂತ್ರ ಸೂಚ್ಯಂಕ ತನ್ನ ಪ್ರಕಟನೆಯಲ್ಲಿ ತಿಳಿಸಿರುವಂತೆ “ಪೊಲೀಸ್ ಹಿಂಸಾಚಾರ, ಮಾವೋವಾದಿ ಹೋರಾಟಗಾರರು ಮತ್ತು ಕ್ರಿಮಿನಲ್ ಗುಂಪುಗಳು ಅಥವಾ ಭ್ರಷ್ಟ ರಾಜಕಾರಣಿಗಳ ಪ್ರತೀಕಾರದಿಂದಾಗಿ ಪತ್ರಕರ್ತರ ಮೇಲೆ ಹಿಂಸಾಚಾರದಂತಹ ಘಟನೆಗಳು ಹೆಚ್ಚಿದ್ದು, ಇವು ಪ್ರಮುಖವಾಗಿ ಭಾರತದಲ್ಲಿ ಪತ್ರಿಕಾ ಸ್ವಾತಂತ್ರ ಕುಸಿಯುತ್ತಿರುವುದಕ್ಕೆ ಪ್ರಮುಖ ಕಾರಣಗಳಾಗಿವೆ” ಎಂದು ಸೂಚಂಕ್ಯ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ