ಹೊಸದಿಲ್ಲಿ, ಎ. 21:ಸೇತುಬಂಧ ಶಿಕ್ಷಣ ಪಡೆದು ದೇಶದಲ್ಲಿನ ದಂತ ವೈದ್ಯರು ಕೂಡಾ ಮಧ್ಯಮ ಹಂತದ ಆರೋಗ್ಯ ಸೇವೆ ಮತ್ತು ಕುಟುಂಬ ವೈದ್ಯಕೀಯ ಸೇವೆ ಒದಗಿಸಲು ಅವಕಾಶ ನೀಡುವ ಪ್ರಸ್ತಾವನೆ ಬಗ್ಗೆ ನೀತಿ ಆಯೋಗ ಹಾಗೂ ಆರೋಗ್ಯ ಸಚಿವಾಲಯ ಗಂಭೀರ ಪರಿಶೀಲನೆ ನಡೆಸಿದೆ.
ಈ ಸಂಬಂಧ ಚರ್ಚಿಸಲು ಎ.22ರಂದು ನೀತಿ ಆಯೋಗ ವಿಶೇಷ ಸಭೆ ಕರೆದಿದೆ. ಭಾರತದಲ್ಲಿ ವೈದ್ಯಕೀಯ ಶಿಕ್ಷಣ ಮಟ್ಟವನ್ನು ಹೆಚ್ಚಿಸುವ ಸಂಬಂಧ ಚರ್ಚಿಸಲು ಪ್ರಧಾನಿ ಕಚೇರಿಯಲ್ಲಿ ಎ. 9ರಂದು ನಡೆದ ಸಭೆಯ ನಡಾವಳಿಗೆ ಅನುಗುಣವಾಗಿ ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಿ ಸೋಮವಾರದ ಸಭೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ದಂತವೈದ್ಯರಿಗೆ ಸೇತುಬಂಧ ಶಿಕ್ಷಣ ನೀಡಿ ಕುಟುಂಬ ವೈದ್ಯರಾಗಿ ಮತ್ತು ಮುಖ್ಯವಾಹಿನಿ ವೈದ್ಯರಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡುವ ಸಾಧ್ಯತೆ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಉನ್ನತ ಮೂಲಗಳು ಹೇಳಿವೆ.
ಭಾರತದ ದಂತವೈದ್ಯಕೀಯ ಮಂಡಳಿ ಒಂದು ವರ್ಷದ ಹಿಂದೆಯೇ ಭಾರತೀಯ ವೈದ್ಯಕೀಯ ಮಂಡಳಿ ಮುಂದೆ ಈ ಪ್ರಸ್ತಾವನೆ ಸಲ್ಲಿಸಿತ್ತು. ಇದು ದಂತವೈದ್ಯರಿಗೆ ಪ್ರಯೋಜನವಾಗುವ ಜತೆಗೆ ದೇಶದ ವೈದ್ಯರ ಕೊರತೆಯನ್ನೂ ನೀಗಿಸಲು ನೆರವಾಗಲಿದೆ ಎಂದು ಹೇಳಲಾಗುತ್ತಿದೆ. ಮೊದಲ ಮೂರು ವರ್ಷಗಳಲ್ಲಿ ದಂತವೈದ್ಯಕೀಯ ಮತ್ತು ವೈದ್ಯಕೀಯ ಕೋರ್ಸ್ಗಳ ಪಠ್ಯಕ್ರಮ ಒಂದೇ ಆಗಿರುವುದರಿಂದ ದಂತವೈದ್ಯರಿಗೆ ಸೂಕ್ತ ಸೇತುಬಂಧ ಶಿಕ್ಷಣ ನೀಡಿ ವೈದ್ಯರಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡುವುದು ಕಾರ್ಯಸಾಧು ಎನ್ನಲಾಗಿದೆ. ಆದರೆ ಭಾರತೀಯ ವೈದ್ಯಕೀಯ ಸಂಘ ಇದನ್ನು ವಿರೋಧಿಸಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ