ನವದೆಹಲಿ: ಅನುಮತಿ ಪಡೆಯದೆ ಚುನಾವಣಾ ರ್ಯಾಲಿ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರಕರಣ ಸಂಬಂಧ ಗಂಭೀರ್ ವಿರುದ್ಧ ದೂರು ದಾಖಲಿಸುವಂತೆ ಚುನಾವಣಾ ಆಯೋಗ ಪೂರ್ವ ದೆಹಲಿಯ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.
ಕ್ರಿಕೆಟ್ ರಂಗದಲ್ಲಿ ಹೆಸರು ಮಾಡಿದ್ದ ಗೌತಮ್ ಗಂಭೀರ್ ಅವರು ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದರು. ಸದ್ಯ ಪೂರ್ವ ದೆಹಲಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
‘ಎರಡು ಕಡೆ ಗುರುತಿನ ಚೀಟಿ’
ಗಂಭೀರ್, ಕರೋಲ್ ಬಾಗ್ ಹಾಗೂ ರಾಜಿಂದರ್ ನಗರದಲ್ಲಿ ಎರಡು ಕಡೆ ಮತದಾನದ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅತಿಶಿ ಅವರು ಈಗಾಗಲೇ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
‘ನಿಮಗೆ ನಿಯಮಗಳೇ ಗೊತ್ತಿಲ್ಲವೆ’
ಎಫ್ಐಆರ್ ದಾಖಲಾದ ಬಳಿಕ ಅತಿಶಿ ಮತ್ತೊಂದು ಟ್ವೀಟ್ ಮಾಡಿದ್ದು, ‘ಮೊದಲು ನಾಮಪತ್ರ ಸಲ್ಲಿಸುವುದರಲ್ಲಿ ಎಡವಿದ್ದೀರಿ, ನಂತರ ಎರಡು ಕಡೆ ಮತದಾನದ ಗುರುತಿನ ಚೀಟಿ ಹೊಂದುವ ಮೂಲಕ ಕ್ರಿಮಿನಲ್ ಅಪರಾಧ ಮಾಡಿದ್ದೀರಿ, ಈಗ ರ್ಯಾಲಿ ನಡೆಸಲು ಅನುಮತಿ ಪಡೆಯದೆ ಎಫ್ಐಆರ್ ದಾಖಲಾಗಿದೆ. ನಿಮಗೆ ನಿಯಮಗಳೇ ಗೊತ್ತಿಲ್ಲದಿರುವಾಗ ಯಾಕೆ ಆಟ ಆಡುತ್ತೀರಿ’ ಎಂದು ಪ್ರಶ್ನಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ