ಕುವೈಟ್:.ಕೆಸಿಎಫ್ ಕುವೈತ್ ಸಿಟಿ ಸೆಕ್ಟರ್ ಇದರ ಪುನರ್ರಚನೆ ಹಾಗೂ ಮಾಸಿಕ ಸ್ವಲಾತ್ ಮಜ್ಲಿಸ್ ದಿನಾಂಕ 26/04/2019 ರಂದು ಮಗ್ರಿಬ್ ನಮಾಝ್ ನ ನಂತರ ಬಹುಮಾನ್ಯ ಬಾದುಷ ಸಖಾಫಿ ಉಸ್ತಾದರ ನೇತ್ರತ್ವದಲ್ಲಿ ಕುವೈಟ್ ಸಿಟಿಯ ಹೋಟೆಲ್ ಸಂಗಮ್ ನಲ್ಲಿ ನಡೆಸಲಾಯಿತು.

ಅಧ್ಯಕ್ಷತೆಯನ್ನು ಸಿಟಿ ಸೆಕ್ಟರ್ ನ ಅಧ್ಯಕ್ಷರಾದ ಅಬ್ಬಾಸ್ ಬಳಂಜೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕೆಸಿಎಫ್ ಕುವೈತ್ ರಾಷ್ಟ್ರೀಯ ಸಮಿತಿಯ ಶೈಕ್ಷಣಿಕ ಚೆಯರ್ಮ್ಯಾನ್ ಬಹುಮಾನ್ಯ ಫಾರೂಕ್ ಸಖಾಫಿ,ಕೆಸಿಎಫ್ ಸೌತ್ ಝೋನ್ ಚೆಯರ್ಮ್ಯಾನ್ ಬಹುಮಾನ್ಯ ಶಾಹುಲ್ ಹಮೀದ್ ಸಅದಿ ಝುಹ್ರಿ,ಬಹುಮಾನ್ಯ ಬಶೀರ್ ಸಖಾಫಿ , ಕೆಸಿಎಫ್ ಕುವೈತ್ NRD ಕನ್ವೀನರ್ ಮುಸ್ತಫಾ ಉಳ್ಳಾಲ ಹಾಗೂ ಕೆಸಿಎಫ್ ಸೌತ್ ಝೋನ್ ಡೈರೆಕ್ಟರ್ ಅಬ್ದುಲ್ ಮಾಲಿಕ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸ್ವಾಗತ ಕೋರಿದ ಸಿಟಿ ಸೆಕ್ಟರ್ ಕಾರ್ಯದರ್ಶಿ ಶೌಕತ್ ಶಿರ್ವ ವರದಿ ವಾಚಿಸಿ ಲೆಕ್ಕ ಪತ್ರ ಮಂಡಿಸಿದರು.
ಸೆಕ್ಟರ್ ಪುನರ್ರಚನೆಯ R.O ಆಗಿ ಬಂದ ಕೆಸಿಎಫ್ ರಾಷ್ಟ್ರೀಯ ಶಿಕ್ಷಣ ವಿಭಾಗದ ಚೆಯರ್ಮ್ಯಾನ್ ಬಹುಮಾನ್ಯ ಫಾರೂಕ್ ಸಖಾಫಿ ಅವರ ನೇತ್ರತ್ವದಲ್ಲಿ ಹೊಸ ಸಮಿತಿಯನ್ನು ರಚಿಸಲಾಯಿತು. ನಿರ್ಗಮನ ಅಧ್ಯಕ್ಷರಾದ ಅಬ್ಬಾಸ್ ಬಳಂಜೆ ಹಾಗೂ ಕಾರ್ಯದರ್ಶಿ ಶೌಕತ್ ಶಿರ್ವ ಅವರನ್ನು ಸೆಕ್ಟರ್ ವತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು.

ಅಧ್ಯಕ್ಷರು – ಇಸ್ಮಾಯಿಲ್ ಕೊಡಗು
ಪ್ರಧಾನ ಕಾರ್ಯದರ್ಶಿ – ಹೈದರ್ ಉಚ್ಚಿಲ
ಕೋಶಾಧಿಕಾರಿ – ಜಮಾಲ್ ಮಣಿಪುರ
ಶಿಕ್ಷಣ ಅಧ್ಯಕ್ಷರು – ಬಶೀರ್ ಸಖಾಫಿ
ಶಿಕ್ಷಣ ಕಾರ್ಯದರ್ಶಿ – ಇಲ್ಯಾಸ್ ಮೊಂಟುಗೊಳಿ
ಸಾಂತ್ವನ ಅಧ್ಯಕ್ಷರು – ಅಝೀಝ್ ತಿಂಗಳಾಡಿ
ಸಾಂತ್ವನ ಕಾರ್ಯದರ್ಶಿ – ಸಲಾಂ ಮಣಿಪುರ
ಪ್ರಕಾಶನ ಅಧ್ಯಕ್ಷರು – ರಹೀಂ ಕೃಷ್ಣಾಪುರ
ಪ್ರಕಾಶನ ಕಾರ್ಯದರ್ಶಿ – ಇಬ್ರಾಹಿಮ್ ಕಾಯಾರ್
ಹಾಗೂ ಹದಿನಾಲ್ಕು ಮಂದಿ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆರಿಸಲಾಯಿತು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ