ನವದೆಹಲಿ: ಹಿಂದೂಗಳೂ ಸಹ ಹಿಂಸಕರು. ಇದಕ್ಕೆ ರಾಮಾಯಣ, ಮಹಾಭಾರತ ಪುರಾಣ ಕಥೆಗಳೇ ಸಾಕ್ಷಿ ಎಂದು ಸಿಪಿಐ ಮುಖ್ಯಸ್ಥ ಸೀತಾರಾಂ ಯಚೂರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
“ಹಿಂದೂಗಳಿಗೆ ಹಿಂಸೆಯಲ್ಲಿ ನಂಬಿಕೆಯಿಲ್ಲ ಎಂದು ಭೋಪಾಲ್ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಹೇಳಿದ್ದಾರೆ. ದೇಶದಲ್ಲಿ ಹಲವರು ರಾಜರು ಯುದ್ಧಗಳನ್ನು ಮಾಡಿದ್ದಾರೆ. ರಾಮಾಯಣ ಮತ್ತು ಮಹಾಭಾರತ ಯುದ್ಧಗಳೂ ಸಹ ಹಿಂಸೆಯಿಂದಲೇ ಕೂಡಿವೆ. ಓರ್ವ ಆರ್ಎಸ್ಎಸ್ ಪ್ರಚಾರಕರಾಗಿ ನೀವು ಪುರಾಣ ಕಥೆಗಳನ್ನು ಹೇಳುತ್ತೀರಿ. ಆದರೂ ಹಿಂದುಗಳು ಹಿಂಸಾತ್ಮಕರಲ್ಲ ಎಂದು ಹೇಗೆ ಹೇಳುತ್ತೀರಿ? ” ಎಂದು ಭೋಪಾಲ್ ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಯಚೂರಿ ಹೇಳಿದರು.
ಹಿಂದೂಗಳು ಹಿಂಸಾಚಾರದಲ್ಲಿ ತೊಡಗುವುದಿಲ್ಲ ಎಂಬುದನ್ನು ಇತಿಹಾಸ ಒಪ್ಪುವುದಿಲ್ಲ. ಅಷ್ಟಕ್ಕೂ ಹಿಂಸಾಚಾರದಲ್ಲಿ ಒಂದು ಧರ್ಮವಿದೆ ಎಂದು ಹೇಳುವುದು ಮತ್ತು ಅದರಲ್ಲಿ ಹಿಂದುಗಳು ಇಲ್ಲ ಎಂದು ಹೇಳುವುದರಲ್ಲಿ ಯಾವ ತರ್ಕವಿದೆ? ಎಂದು ಯಚೂರಿ ಪ್ರಶ್ನಿಸಿದ್ದಾರೆ.
ಇದೇ ವೇಳೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಗೆ ಭೋಪಾಲ್ ನಲ್ಲಿ ಟಿಕೆಟ್ ನೀಡುವ ಮೂಲಕ ಬಿಜೆಪಿ ಹಿಂದೂಗಳ ವೋಟ್ ಬ್ಯಾಂಕಿನ ಧ್ರುವೀಕರಿಸುತ್ತಿದೆ. ಬಿಜೆಪಿಗೆ ಶೇ.50 ಸ್ಥಾನಗಳನ್ನು ಗೆಲ್ಲಲು ಸಾಧ್ಯವೋ, ಇಲ್ಲವೋ ಎಂಬ ಭಯವಿದೆ. ಹೀಗಾಗಿ ಮತಕ್ಕಾಗಿ ಕೋಮುಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ