ಕೊಲಂಬೋ (ಮೇ.4) : ಶ್ರೀಲಂಕಾದಲ್ಲಿ ಏಪ್ರಿಲ್ 21 ರ ಈಸ್ಟರ್ ಭಾನುವಾರದ ದಿನದ ಪ್ರಾರ್ಥನೆ ಸಮಯದಲ್ಲಿ ಚರ್ಚ್ನಲ್ಲಿ ಆತ್ಮಹತ್ಯಾ ಬಾಂಬ್ ಸ್ಫೋಟಿಸುವ ಮೂಲಕ 250 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣರಾದ ಭಯೋತ್ಪಾದಕರು ದಾಳಿಗೂ ಮುನ್ನ ಭಾರತದಲ್ಲಿ ತರಬೇತಿ ಪಡೆದಿದ್ದಾರೆ ಎಂದು ಶ್ರೀಲಂಕಾ ಸೇನಾ ಮುಖ್ಯಸ್ಥ ಮಹೇಶ್ ಸೇನಾನಾಯಕ ಆರೋಪಿಸಿದ್ದಾರೆ.
ಅಂತಾರಾಷ್ಟ್ರೀಯ ಬಿಬಿಸಿ ಸುದ್ದಿ ಸಂಸ್ಥೆಗೆ ಸಂದರ್ಶನ ನೀಡಿರುವ ಶ್ರೀಲಂಕಾ ಸೇನಾ ಮುಖ್ಯಸ್ಥ ಮಹೇಶ್ ಸೇನಾನಾಯಕ, “ಲಂಕಾದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿರುವ ಉಗ್ರರು ದಾಳಿಗೂ ಮುಂಚೆ ಭಾರತದ ಬೆಂಗಳೂರು ಕೇರಳ ಹಾಗೂ ಕಾಶ್ಮೀರದಲ್ಲಿ ಉಗ್ರರಿಂದ ತರಬೇತಿ ಪಡೆದಿರುವ ಸಾಧ್ಯತೆ ಇದೆ. ಈ ಕುರಿತು ಗೂಢಚಾರಿ ಇಲಾಖೆಗೆ ಮಾಹಿತಿ ಲಭ್ಯವಾಗಿದೆ” ಎಂದು ಅವರು ತಿಳಿಸಿದ್ದಾರೆ.
“ರಿಯಾಝ್ ಅಬುಬಕ್ಕರ್ ಎಂಬ ಉಗ್ರನನ್ನು ಬಂಧಿಸಿದ ನಂತರ ಈ ದಾಳಿಯ ಹಿಂದೆ ಇಸ್ಲಾಮಿಕ್ ಸ್ಟೇಟ್ ಉಗ್ರರ ಕೈವಾಡ ಇರುವ ಕುರಿತ ಮಾಹಿತಿ ಖಚಿತವಾಗಿತ್ತು. ಅಲ್ಲದೆ ಶ್ರೀಲಂಕಾದ ರಾಷ್ಟ್ರೀಯ ತನಿಖಾ ದಳ ತಮಿಳುನಾಡಿನಲ್ಲಿ ಸಾಕಷ್ಟು ದಾಳಿಗಳನ್ನು ಸಂಘಟಿಸಿದ್ದು, ಇಸ್ಲಾಮಿಕ್ ಸ್ಟೇಟ್ ಉಗ್ರರು ತಮಿಳುನಾಡಿನಿಂದ ಲಂಕಾ ದಾಳಿಯನ್ನು ಸಂಘಟಿಸಿದ್ದಾರೆ. ಅಲ್ಲದೆ ತಮಿಳುನಾಡಿನಲ್ಲಿ ಸಾಕಷ್ಟು ಸಂಖ್ಯೆಯ ಸ್ಲೀಪರ್ ಸೆಲ್ಗಳು ಕಾರ್ಯನಿರತರಾಗಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ” ಎಂದಿದ್ದಾರೆ.
ಅಲ್ಲದೆ “ಉಗ್ರ ರಿಯಾಝ್ ಅಬುಬಕ್ಕರ್ ಹಾಗೂ ಆತ್ಮಹತ್ಯಾ ಬಾಂಬರ್ಗಳಾದ ಝಹ್ರಾನ್ ಹಾಶಿಮ್ ಶ್ರೀಲಂಕಾದಲ್ಲಿ ಬಾಂಬ್ ದಾಳಿ ಸಂಘಟಿಸುವ ಮುನ್ನ ಕೇರಳದಲ್ಲಿ ತರಬೇತಿ ಪಡೆದಿದ್ದರು. ಈ ಕುರಿತು ಗೂಢಚಾರಿ ಇಲಾಖೆ ಸಾಕ್ಷಿ ಸಮೇತ ಮಾಹಿತಿ ನೀಡಿದೆ” ಎಂದು ಅವರು ತಿಳಿಸಿದ್ದಾರೆ.
ಏಪ್ರಿಲ್ 21 ರಂದು ಉಗ್ರಗಾಮಿಗಳು ಶ್ರೀಲಂಕಾದ ಚರ್ಚ್ ಮೇಲೆ ಸಂಘಟಿಸಿದ್ದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರು. ಈ ದಾಳಿಗೆ ಶ್ರೀಲಂಕಾ ರಕ್ಷಣಾ ವ್ಯವಸ್ಥೆಯೇ ಕಾರಣ ಎಂದು ಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ದೂಷಿಸಿದ್ದರು.















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
ಇರಾನ್ ಒಪ್ಪಂದ ಪಾಲಿಸದಿದ್ದರೆ ನೆತ್ತಿ ಮೇಲೆ ಬಾಂಬ್ ವರ್ಷಣ- ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
“ಬೆಲೆ ಏರಿಕೆ ನನಗೆ ಇಷ್ಟ”-ಇರಾನ್ ಯುದ್ಧದ ಕಾರಣದಿಂದ ಉಂಟಾದ ಬೆಲೆ ಏರಿಕೆಯ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
‘ಯುದ್ಧ ಕೊನೆಗೊಳಿಸುವುದಕ್ಕೆ ಆದ್ಯತೆ ನೀಡಬೇಕು’- ಅಮೆರಿಕದ 14 ಅಂಶಗಳ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ
ಕೊಲೆ ಬೆದರಿಕೆ, ದಂಗೆಯ ಸಾಧ್ಯತೆ; ನಿವಾಸ ಬಿಟ್ಟು ಹೊರಬಾರದ ಪುಟಿನ್- ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ