ತೌಡುಗೊಳಿ, ಮೇ 12: ಎಸ್ಸೆಸ್ಸೆಫ್ ತೌಡುಗೊಳಿ ಶಾಖಾ ವತಿಯಿಂದ ಪಕ್ಷಿಗೊಂದು ಹನಿ ನೀರು ಅಭಿಯಾನ ಕಾರ್ಯಕ್ರಮವು ತೌಡು ಗೊಳಿ ಪರಿಸರದಲ್ಲಿ ಉಮರುಲ್ ಫಾರೂಕ್ ಸುನ್ನಂಗಳ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ತೌಡುಗೋಳಿ ಜುಮಾ ಮಸೀದಿ ಕತೀಬ್ ಅಬ್ದುಲ್ ಹಮೀದ್ ಸಖಾಫಿಯವರು ಬೇಸಿಗೆ ಕಾಲದಲ್ಲಿ ನೀರಿಲ್ಲದೆ ಮೂಕ ಪ್ರಾಣಿ ಪಕ್ಷಿಗಳು ಸಾವಿನಂಚಿನಲ್ಲಿದೆ ನಾವು ಅದರ ರಕ್ಷಣೆ ಮಾಡಬೇಕಾಗಿದೆ ಎಂದು
ಯುವಕರಲ್ಲಿ ಅರಿವು ಮೂಡಿಸಿದರು.
ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಮುಡಿಪು ಡಿವಿಜನ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ಮಾತನಾಡುತ್ತಾ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲ ತಾಪಕ್ಕೆ ಎಲ್ಲಾ ಜೀವಿಗಳು ತತ್ತರಿಸುತ್ತಿವೆ. ಮನುಷ್ಯರಷ್ಟೇ ಅಲ್ಲ, ಪ್ರಾಣಿ ಪಕ್ಷಿಗಳು ನೀರಿಗಾಗಿ ಕಷ್ಟ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಅರಿತ ಪ್ರಾಣಿ, ಪಕ್ಷಿಗಳ ಸಂಕಷ್ಟ ಅರಿತು ರಕ್ಷಣೆ ಮಾಡಲು ಇಲ್ಲಿಯ ಎಸ್ಸೆಸ್ಸೆಫ್ ವಿದ್ಯಾರ್ಥಿಗಳು ಮುಂದಾಗಿದ್ದಾರೆ. ಆ ಮೂಲಕ ಮಾನವ ಧರ್ಮಕ್ಕೆ ಮುನ್ನಡೆ ಬರೆದಿದ್ದಾರೆ.

ತಾಲ್ಲೂಕಿನಾದ್ಯಂತ ದಾಖಲೆ ಪ್ರಮಾಣದಲ್ಲಿ ಬಿಸಿಲಿನ ತಾಪಮಾನವಿದೆ. ಜಲಮೂಲಗಳು ಬತ್ತಿವೆ. ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ನೀರಿಗಾಗಿ ಮೈಲುಗಟ್ಟಲೆ ಅಲೆಯಬೇಕಾಗಿದೆ. ಇದು ಸಣ್ಣ ಪಕ್ಷಿ, ಪ್ರಾಣಿಗಳ ಬದುಕಿಗೆ ಮಾರಕ ವಾಗಿದೆ. ನೀರಿಲ್ಲದೆ ಪಕ್ಷಿಗಳು ಜೀವ ಕಳೆದುಕೊಳ್ಳುವ ಭೀತಿ ಕಾಡುತ್ತಿದೆ.
ಪ್ರಾಣಿ, ಪಕ್ಷಿಗಳ ಈ ಸಮಸ್ಯೆ ಕಂಡ ಇಲ್ಲಿಯ ಎಸ್ಸೆಸ್ಸೆಫ್ ವಿದ್ಯಾರ್ಥಿಗಳು, ಅವರುಗಳ ರಕ್ಷಣೆಗಾಗಿ ತಮ್ಮ ಶೈಲಿಯಲ್ಲಿ ನೆರವಿನ ಹಸ್ತ ಕೈಚಾಚಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಸಫೀಕ್ ತೌಡುಗೋಳಿ,ಉಮರುಲ್ ಫಾರೂಕ್,ಮೊಯಿದಿನ್ ಕುಂಞ ಬಲಪು ,ಬದುರುದ್ಧೀನ್ ಬಲಪು, ಸಿದ್ದೀಕ್ ಬವಲಗುರಿ , ಅನೀಫ್ ತೌಡುಗೋಳಿ ಮುಂತಾದಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೇಯಲ್ಲಿ ಮಸೂದ್ ಬಾಹ್ಶನಿ ಉಸ್ತಾದರು ಕಾರ್ಯಕ್ರಮಕ್ಕೆ ಆಗಮಸಿದ ಗಣ್ಯರನ್ನು ಸ್ವಾಗತಿಸಿ, ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ