ದುಬೈ:ದುಬೈ ಇಪ್ಪತ್ತಮೂರನೇ ಅಂತರಾಷ್ಟ್ರೀಯ ಹೋಲಿ ಕುರ್ಆನ್ ಅವಾರ್ಡ್ ಪ್ರಯುಕ್ತ ನಡೆಸಲ್ಪಡುವ ರಂಝಾನ್ ಪ್ರಭಾಷಣ ಕಾರ್ಯಕ್ರಮದಲ್ಲಿ ದುಬೈ ಜಾಮಿಅ ಸಅದಿಯ್ಯ ಅರಬಿಯ್ಯ ಇಂಡಿಯನ್ ಸೆಂಟರ್ ಪ್ರತಿನಿಧಿಯಾಗಿ ಎಸ್ ವೈ ಎಸ್ ಕೇರಳ ರಾಜ್ಯ ಉಪಾದ್ಯಕ್ಷ ಮುಹಮ್ಮದ್ ಕುಂಞಿ ಸಖಾಫಿ ಕೊಲ್ಲಂ ಮತ್ತು ಅಸ್ಸಯ್ಯಿದ್ ಬಾಯಾರ್ ತಂಘಳ್ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮವು ಮೇ 15ನೇ ಬುದವಾರ ದುಬೈ ಊದ್ ಮೆಹ್ತಾ ರಸ್ತೆಯ ಅಲ್ ಜದ್ದಾಫ್ ನಲ್ಲಿರುವ ಅಲ್ ವಸಲ್ ಕ್ಲಬ್ ನಲ್ಲಿ ರಾತ್ರಿ ಒಂಭತ್ತು ಗಂಟೆಗೆ ನಡೆಯಲಿದೆ. ಕಳೆದ ವರ್ಷಗಳಂತೆ ಈ ವರ್ಷವೂ ಸಾವಿರಾರು ಸಂಖ್ಯೆಯಲ್ಲಿ ವಿಶ್ವಾಸಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕುರ್ಆನ್ ಅವತೀರ್ಣಗೊಳಿಸಿದ ಪವಿತ್ರ ರಂಝಾನಿನಲ್ಲಿ ಕುರ್ಆನಿನ ಸಂದೇಶವನ್ನು ಜನರಿಗೆ ತಲುಪಿಸಲು ಮತ್ತು ಕುರ್ಆನ್ ಅಧ್ಯಯನವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ದುಬೈ ಸರಕಾರವು ಕಳೆದ ಇಪ್ಪತ್ತಮೂರು ವರ್ಷಗಳಿಂದ ಆಯೋಜಿಸುತ್ತಾ ಬಂದಿರುವ ಯೋಜನೆಗಳಲ್ಲಿ ಅತ್ಯಂತ ಮಹತ್ವಪೂರ್ಣವಾದ ಕಾರ್ಯಕ್ರಮವಾಗಿದೆ.
ರಂಝಾನ್ ಪ್ರಭಾಷಣ ಕಾರ್ಯಕ್ರಮವನ್ನು ಯಶಸ್ವೀಗೊಳಿಸಲು ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳು ಸಂಘಟಕರು ನಡೆಸುತ್ತಿದ್ದು ಮೀಡಿಯಾ ಮುಖಾಂತರ ಜನರನ್ನು ನೇರವಾಗಿ ಸಂಪರ್ಕಿಸಿ ಕಾರ್ಯಕ್ರಮಕ್ಕೆ ತಲುಪಿಸುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಪ್ರವಾಸಿ ಮಹಿಳೆಯರಿಗೆ ವಿಶೇಷ ಸ್ಥಳವಕಾಶವನ್ನು ಏರ್ಪಡಿಸಲಾಗಿದೆ. ವಿವಿಧ ಎಮಿರೇಟ್ಸ್ ಗಳಿಂದ ಬರುವ ವಿಶ್ವಾಸಿಗಳಿಗೆ ವಿಶೇಷ ಬಸ್ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ. ಕಾರ್ಯಾಕ್ರಮದ ಯಶಸ್ವಿಗಾಗಿ ಪ್ರತಿಯೊಬ್ಬ ಕನ್ನಡಿಗನೂ ಕೈಜೋಡಿಸಬೇಕೆಂದು ಕರ್ನಾಟಕ ಕಲ್ಚರಲ್ ಫೌಂಡೇಶನ್ ಯು.ಎ.ಇ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ