ನವದೆಹಲಿ: ಬಿಜೆಪಿ ಈ ಬಾರಿ ಅತೀ ಹೆಚ್ಚು ಸ್ಥಾನ ಪಡೆಯುತ್ತೆ ಅಂತಾ ಖ್ಯಾತ ಚುನಾವಣಾ ತಜ್ಞ, Centre for the Study of Developing Societies ನಿರ್ದೇಶಕ ಸಂಜಯ್ ಕುಮಾರ್ ಹೇಳಿದ್ದಾರೆ.
ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆಯಲಿದೆ. ಜೊತೆಗೆ ಬಿಜೆಪಿ ನೇತೃತ್ವದ ಎನ್ಡಿಎ ಬಹುಮತ ಗಳಿಸುವತ್ತ ಸಾಗುತ್ತದೆ. ಆದ್ರೆ ಕಾಂಗ್ರೆಸ್ 100 ಸ್ಥಾನ ಗಳಿಸುವುದು ಸಹ ಡೌಟ್. 75 ರಿಂದ 80 ಸ್ಥಾನ ಮಾತ್ರ ‘ಕೈ’ ಪಕ್ಷದ ಪಾಲಾಗಲಿದೆ ಅಂತಾ ಇವರು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಈ ಬಾರಿ ಬಿಜೆಪಿ ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೆ. ಆದ್ರೆ ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ಹಿಮಾಚಲ ಪ್ರದೇಶ, ಉತ್ತರಾಖಂಡ್ ಹಾಗೂ ದೆಹಲಿಯಲ್ಲಿ 2014ರಲ್ಲಿ ಗಳಿಸಿದ್ದಷ್ಟು ಸ್ಥಾನವನ್ನು 2019ರಲ್ಲಿ ಪಡೆಯಲ್ಲ ಎಂದಿದ್ದಾರೆ.
ಈ ಚುನಾವಣೆಯಲ್ಲಿ ಮೋದಿ ಪ್ರಚಾರದ ವೈಖರಿ ಬಗ್ಗೆಯೂ ಸಂಜಯ್ ಕುಮಾರ್ ಮಾತನಾಡಿದ್ದಾರೆ. ಒಂದು ಕ್ಷೇತ್ರದಲ್ಲಿ ಮೋದಿ ಜಾತಿ ವಿಚಾರವಿಟ್ಟು ಜನರ ವೋಟ್ ಸೆಳೆಯಲು ಯತ್ನಿಸುತ್ತಾರೆ. ಇನ್ನೊಂದೆಡೆ ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡ್ತಾರೆ. ಮತ್ತೊಂದೆಡೆ ರಾಜೀವ್ ಗಾಂಧಿ ನಂಬರ್ 1 ಭ್ರಷ್ಟಾಚಾರಿ ಎನ್ನುತ್ತಾರೆ. ಇನ್ನೂ ಕೆಲವೆಡೆ ಬಾಲಕೋಟ್ ಏರ್ಸ್ಟ್ರೈಕ್, ಪುಲ್ವಾಮಾದಲ್ಲಿ ಉಗ್ರರ ದಾಳಿ, ರಾಷ್ಟ್ರೀಯ ಭದ್ರತೆಯ ವಿಚಾರದ ಬಗ್ಗೆ ಭಾಷಣ ಮಾಡುತ್ತಾರೆ. ಮತ್ತೆ ಕೆಲವೆಡೆ ಮಹಾಘಟಬಂಧನ್ ಹಾಗೂ ಪ್ರಾದೇಶಿಕ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸ್ತಾರೆ. ಹೀಗೆ ಒಂದೊಂದು ಕಡೆ ಒಂದೊಂದು ರೀತಿಯ ಅಸ್ತ್ರವನ್ನು ಪ್ರಯೋಗಿಸ್ತಿರುವುದು ಅವರ ರಣತಂತ್ರದ ಒಂದು ಭಾಗವಾಗಿದೆ ಅಂತಾ ಸಂಜಯ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ