ಬೆಂಗಳೂರು: ಬಿಜೆಪಿಯ ಸಂಸದರು, ಅಭ್ಯರ್ಥಿಗಳು ಸದಾ ಒಂದಲ್ಲೊಂದು ವಿವಾದವನ್ನು ಸೃಷ್ಟಿಸುತ್ತಲೇ ಇರುತ್ತಾರೆ. ಮಹಾತ್ಮಾ ಗಾಂಧೀಜಿ ಅವರನ್ನು ಗುಂಡಿಟ್ಟು ಹತ್ಯೆಗೈದ ನಾಥುರಾಂ ಗೋಡ್ಸೆ ಒಬ್ಬ ದೇಶಭಕ್ತ ಎಂದು ಸಾಧ್ವಿ ಪ್ರಜ್ಞಾ ಸಿಂಗ್ ನೀಡಿದ್ದ ಹೇಳಿಕೆಯು ಚರ್ಚೆಯಲ್ಲಿರುವಾಗಲೇ ಕರ್ನಾಟಕದ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿಕೊಂಡಿದ್ದ ಸಾಲುಗಳು ವಿವಾದದ ರೂಪ ಪಡೆದುಕೊಂಡಿದೆ.
ಸಂಸದ ನಳಿನ್ ಕುಮಾರ್ ಕಟೀಲ್ ಅವರು ನಾಥುರಾಂ ಗೋಡ್ಸೆ ಜತೆಗೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹೋಲಿಕೆ ಮಾಡಿದ್ದಾರೆ. ಹತ್ಯೆಗೀಡಾಗಿ ಸುಮಾರು 30 ವರ್ಷಗಳ ನಂತರ ರಾಜೀವ್ ಗಾಂಧಿ ವಿಷಯ ಕೇಂದ್ರದ ಆಡಳಿತಾರೂಢ ಪಕ್ಷದ ಚುನಾವಣಾ ಪ್ರಚಾರದ ಸರಕಾಗಿ ಬಳಕೆಯಾಗುತ್ತಿದೆ.
ಯಾರೋ ಒಬ್ಬ ಬಿಜೆಪಿ ಕಾರ್ಯಕರ್ತ ತನ್ನ ಫೇಸ್ಬುಕ್ ಪೇಜಿನಲ್ಲಿ ತನ್ನ ಅಜ್ಞಾನದಿಂದ ಕೂಡಿದ ಲಾಜಿಕನ್ನು ಪ್ರಕಟಿಸಿದ್ದ. ಅದೊಂದು ಮಹತ್ಕಾರ್ಯವೆಂದು ಮನಗಂಡ ಸಂಸದ ನಳಿನ್ ಕುಮಾರ್ ತನ್ನ ಟ್ವಿಟರ್ ಖಾತೆಯಲ್ಲಿ ಅದನ್ನೇ ನಕಲು ಮಾಡಿ ಪ್ರಕಟಿಸಿ ವಿವಾದ ಸೃಷ್ಟಿಸಿದ್ದಾರೆ.

’ಗೋಡ್ಸೆ ಒಬ್ಬರನ್ನು ಕೊಂದರು, ಕಸಬ್ ಕೊಂದಿದ್ದು 72 ಜನರನ್ನು, ರಾಜೀವ್ ಗಾಂಧಿ 17,000 ಜನರ ಸಾವಿಗೆ ಕಾರಣರಾದರು. ಇವರಲ್ಲಿ ಯಾರು ಹೆಚ್ಚು ಕ್ರೂರರೆಂದು ನೀವೇ ನಿರ್ಣಯಿಸಿ’ ಎಂದು ನಳಿನ್ ಕುಮಾರ್ ಕಟೀಲ್ ಗುರುವಾರ ಟ್ವೀಟ್ ಮಾಡಿದ್ದರು.
ಭೋಪಾಲ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಹಾಗೂ ನಟ–ರಾಜಕಾರಣಿ ಕಮಲ್ ಹಾಸನ್ ಗೋಡ್ಸೆ ಕುರಿತಾಗಿ ನೀಡಿರುವ ಹೇಳಿಕೆಗಳು ತೀವ್ರ ಚರ್ಚೆಯಲ್ಲಿದ್ದು, ಹಲವರು ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ವಕ್ತಾರ ಜಿ.ವಿ.ಎಲ್.ನರಸಿಂಹರಾವ್ ಪ್ರತಿಕ್ರಿಯಿಸಿ, ‘ಸಾಧ್ವಿ ಅವರ ಹೇಳಿಕೆಯನ್ನು ಬಿಜೆಪಿ ಒಪ್ಪುವುದಿಲ್ಲ. ಪಕ್ಷ ಈ ಹೇಳಿಕೆಯನ್ನು ಖಂಡಿಸುತ್ತದೆ’ ಎಂದಿದ್ದರು.
26/11ರ ಭಯೋತ್ಪಾದಕರ ದಾಳಿಯಲ್ಲಿ ಹಲವು ಜನರ ಹತ್ಯೆ ಮಾಡಿದ್ದ ಅಜ್ಮಲ್ ಕಸಬ್ನ ಸಾಲಿನಲ್ಲಿಯೇ ರಾಜೀವ್ ಹೆಸರು ಪ್ರಸ್ತಾಪಿಸಿದ್ದಾರೆ. ದಕ್ಷಿಣ ಕನ್ನಡ ಕ್ಷೇತ್ರವನ್ನು ಎರಡು ಬಾರಿ ಸಂಸದರಾಗಿ ಕಟೀಲ್ ಪ್ರತಿನಿಧಿಸಿದ್ದಾರೆ. ಈ ಬಾರಿಯೂ ಕ್ಷೇತ್ರದ ಪ್ರಮುಖ ಅಭ್ಯರ್ಥಿಯಾಗಿದ್ದಾರೆ.
ಟ್ವೀಟ್ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದಂತೆ ಕಟೀಲ್ ತಾವು ಮಾಡಿದ್ದ ಟ್ವೀಟ್ ತೆಗೆದು ಹಾಕಿದ್ದಾರೆ.
ಇಂದಿರಾ ಗಾಂಧಿ ಹತ್ಯೆಯ ನಂತರ 1984ರಲ್ಲಿ ನಡೆದ ಸಿಖ್ ವಿರೋಧಿ ಗಲಭೆಯಲ್ಲಿ ಸಾವಿರಾರು ಜನರು ಸಾವಿಗೀಡಾಗಿದ್ದರು. ಈ ಘಟನೆಯನ್ನು ಬಿಜೆಪಿ ಕಾಂಗ್ರೆಸ್ ವಿರುದ್ಧ ಟೀಕಾಸ್ತ್ರವಾಗಿ ಬಳಕೆ ಮಾಡಿಕೊಳ್ಳುತ್ತಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ