ದುಬೈ : ಎಲ್ಲಾ ವಿಧ ಭಯೋತ್ಪಾದನೆಗಳನ್ನು ಹಾಗೂ ಅಸಹಿಷ್ಣುತೆಯನ್ನು ಕಠಿಣವಾಗಿ ವಿರೋಧಿಸಿದ ಧರ್ಮವಾಗಿದೆ ಇಸ್ಲಾಮ್, ಶಾಂತಿ ಮತ್ತು ಸಮಾಧಾನವು ಇಸ್ಲಾಮಿನ ಮುದ್ರೆಯಾಗಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು.

ಭಯೋತ್ಪಾದನೆ ವಿರುದ್ಧ ಕಠಿಣ ನಿರ್ಣಯ ಕೈಗೊಳ್ಳವ ಸಲುವಾಗಿ ಯುಎಇ ಗ್ರಹ ಮಂತ್ರಿ ಹಾಗೂ ಉಪ ಪ್ರಧಾನಿ ಶೈಖ್ ಸೈಫ್ ಬಿನ್ ಝಾಯಿದ್ ಅವರ ಆಹ್ವಾನದ ಮೇರೆಗೆ ದುಬೈ ಪೊಲೀಸ್ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್. ದಾಹಿ ಖಲ್ಪಾನ್ ತಮೀಮ್ ಅವರ ನಿವಾಸದಲ್ಲಿ ನಡೆದ ಪ್ರಮುಖ ಗಣ್ಯರ ಸಮ್ಮಿಲನದಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಯುಎಇ ಸರಕಾರದ ಮೇಲ್ದರ್ಜೆಯ ಅಧಿಕಾರಿಗಳು, ಪ್ರಮುಖ ನೇತಾರರು, ರಾಜ ಕುಟುಂಬದ ಪ್ರತಿನಿಧಿಗಳು ಹಾಗೂ ರಾಜತಾಂತ್ರಿಕರು ಭಾಗವಹಿಸಿದ ಕಾರ್ಯಕ್ರಮದಲ್ಲಿ,ಭಯೋತ್ಪಾದನೆ ವಿರುದ್ಧ ಇಸ್ಲಾಮಿನ ನಿಲುವು ಎಂಬ ವಿಷಯದ ಬಗ್ಗೆ ಭಾರತದ ಗ್ರಾಂಡ್ ಮುಫ್ತಿ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಮಾತಾಡಿದರು.
ಶಾಂತಿಯುತವಾದ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳುವ ಯುಎಇ ಸರಕಾರ ಕ್ರಮವನ್ನು ಗ್ರಾಂಡ್ ಮುಫ್ತಿಯವರು ಮುಕ್ತಕಂಠದಿಂದ ಶ್ಲಾಘಿಸಿದರು. ರಮಳಾನಿನ ಆಧ್ಯಾತ್ಮಿಕತೆಯನ್ನು ವಿಶ್ವಾಸಿಗಳಿಗೆ ಧನಾತ್ಮಕವಾಗಿ ತಲುಪಿಸಲು ಯುಎಇ ಸರಕಾರವು ಕೈಗೊಳ್ಳುತ್ತಿರುವ ಕ್ರಮಗಳು ಪ್ರಶಂಸನೀಯವಾಗಿದೆ ಎಂದು ಗ್ರಾಂಡ್ ಮುಫ್ತಿ ಹೇಳಿದರು.

ಇದೇ ವೇಳೆ ಇಂಡಿಯನ್ ಗ್ರಾಂಡ್ ಮುಫ್ತಿಯಾಗಿ ನೇಮಕಗೊಂಡ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಅವರನ್ನು ದುಬೈ ಪೊಲೀಸ್ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್. ದಾಹಿ ಖಲ್ಪಾನ್ ತಮೀಮ್ ಅವರು ಅಭಿನಂದಿಸಿದರು.
ಮೂಲ : ಸಿರಾಜ್ ಡೈಲಿ
ಕನ್ನಡಕ್ಕೆ : ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ