ಕುವೈತ್ ಸಿಟಿ: ಗಲ್ಫ್ ವಲಯವು ಅತ್ಯಂತ ಗಂಭೀರ ಮತ್ತು ಅಪಾಯಕಾರಿ ಸನ್ನಿವೇಶಗಳನ್ನು ಎದುರಿಸುತ್ತಾ ಸಾಗುತ್ತಿದೆ ಎಂದು ಕುವೈತ್ ಅಮೀರ್ ಆತಂಕ ವ್ಯಕ್ತಪಡಿಸಿದ್ದಾರೆ. ಕಾರ್ಯತಂತ್ರ ಪ್ರತಿನಿಧಿಗಳಿಗೆ ಈ ಸನ್ನಿವೇಶದಲ್ಲಿ ದುಪ್ಪಟ್ಟು ಜವಾಬ್ದಾರಿ ಇದ್ದು, ಸಮಾಧಾನಕರ ವಾತಾವರಣವನ್ನು ಮರಳಿಪಡೆಯಲೇ ಬೇಕಿದೆ ಎಂದವರು ತಿಳಿಸಿದ್ದಾರೆ.
ವಿದೇಶಾಂಗ ಸಚಿವಾಲಯದಲ್ಲಿ ಹಮ್ಮಿಕೊಂಡ ರಮಝಾನ್ ಸಂದರ್ಶನ ವೇಳೆ ಅಮೀರ್ ಶೈಖ್ ಅಲ್ ಅಹ್ಮದ್ ಅಲ್ ಜಾಬಿರ್ ಅಲ್ ಸ್ವಬಾಹ್ ಈ ಬಗ್ಗೆ ಮಾತನಾಡುತ್ತಿದ್ದರು. ದೇಶದ ಹಿತವನ್ನು ಮುಂದಿರಿಸಿ ಕಾರ್ಯಾಚರಿಸಬೇಕೆಂದು ಅವರು ವಿದೇಶಾಂಗ ಸಚಿವಾಲಯದ ಸಿಬ್ಬಂದಿಗೆ ತಿಳಿಸಿದ್ದು, ವಲಯದಲ್ಲಿ ಸಮಾಧಾನಕರ ಸನ್ನಿವೇಶವನ್ನು ಮರಳಿಪಡೆಯುವುದು ಸಾಧ್ಯ ಎನ್ನುವ ಆಶಾವಾದವನ್ನು ವ್ಯಕ್ತಪಡಿಸಿದ್ದಾರೆ.
ಕಾರ್ಯತಂತ್ರ ರಂಗದಲ್ಲಿನ ಕುವೈತ್ ನ ಕಾರ್ಯವೈಖರಿಯನ್ನು ವಿಶ್ವವು ಅಂಗೀಕರಿಸಿದೆ. ಯಾವುದೇ ಪಕ್ಷ ಸೇರದೆ ಶಾಂತಿಗಾಗಿ ನೆಲೆ ನಿಲ್ಲುವುದು ದೇಶದ ನಿಲುವಾಗಿದೆ ಎಂದು ಅಮೀರ್ ವ್ಯಕ್ತಪಡಿಸಿದರು.
ಯುವರಾಜ ನವಾಫ್ ಅಲ್ ಅಹ್ಮದ್ ಅಲ್ ಸ್ವಾಬಾಹ್ ಜೊತೆಗಿದ್ದರು. ವಿದೇಶಾಂಗ ಸಚಿವ ಶೈಖ್ ಸಬಾಹ್ ಖಾಲಿದ್ ಅಲ್ ಹಮದ್ ಅಸ್ಸಬಾಹ್ ಅಮೀರ್ ಮತ್ತು ಯುವರಾಜರನ್ನು ಬರಮಾಡಿಕೊಂಡರು. ನ್ಯಾಷನಲ್ ಗಾರ್ಡ್ ಉಪ ಅಧಿಕಾರಿ ಶೈಖ್ ಮಿಶ್ಅಲ್ ಅಲ್ ಅಹ್ಮದ್ ಅಸ್ಸಬಾಹ್, ಪ್ರಧಾನಮಂತ್ರಿ ಶೈಖ್ ಜಾಬಿರ್ ಮುಬಾರಕ್ ಅಲ್ ಹಮದ್ ಅಸ್ಸಬಾಹ್ ಮುಂತಾವರು ಅಮೀರರನ್ನು ಅನುಗಮಿಸಿದ್ದರು. ಸಭೆಯಲ್ಲಿ ಸ್ಪೀಕರ್ ಮರ್ಝೂಖ್ ಅಲ್ ಗ್ವಾನಿಮ್ ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು