ಕೌಲಾಲಂಪುರ್,ಮೇ.27: ಭಾರತದ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಉಸ್ತಾದರು ಮಲೇಷ್ಯಾ ಪ್ರಧಾನ ಮಂತ್ರಿ ಡಾ.ಮಹಾತಿರ್ ಬಿನ್ ಮುಹಮ್ಮದ್’ರವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಇಂದು ಬೆಳಿಗ್ಗೆ ಕೌಲಾಲಂಪುರದಲ್ಲಿರುವ ಪ್ರಧಾನಮಂತ್ರಿಯವರ ಕಚೇರಿಗೆ ತಲುಪಿದ ಭಾರತದ ಗ್ರ್ಯಾಂಡ್ ಮುಫ್ತಿಯವರಿಗೆ ಅದ್ದೂರಿ ಸ್ವಾಗತ ದೊರೆಯಿತು. ಭೇಟಿಯಲ್ಲಿ ಮಲೇಷ್ಯಾ ಪ್ರಧಾನ ಮಂತ್ರಿಯವರಿಗೆ ಭಾರತದ ಮುಸ್ಲಿಮರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಗ್ರ್ಯಾಂಡ್ ಮುಫ್ತಿ ಹೇಳಿದರು.

ಡಾ.ಮಹಾತಿರ್ ಬಿನ್ ಮುಹಮ್ಮದ್’ರವರ ದಶಕಗಳ ಸವಿಶೇಷ ದೂರದೃಷ್ಟಿ ಹಾಗೂ ಜನ ಸಮೂಹದೊಂದಿಗಿರುವ ಪರಸ್ಪರ ಉತ್ತಮ ಬಾಂಧವ್ಯವು ಮಲೇಷಿಯಾವನ್ನು ಉನ್ನತಿಗೇರಿಸಿದೆ ಎಂದು ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಹೇಳಿದರು.
ಮರ್ಕಝ್ ನ ನಿರ್ದೇಶಕರಾದ ಎ.ಪಿ. ಅಬ್ದುಲ್ ಹಕೀಮ್ ಅಝ್ಹರಿ ಜೊತೆಗಿದ್ದರು.ಭಾರತದಲ್ಲಿ ಜಾಮಿಯಾ ಮರ್ಕಝ್ ನಡೆಸುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಚಟುವಟಿಕೆಗಳ ಕುರಿತು ವಿಸ್ತೃತ ಮಾಹಿತಿಯನ್ನು ಪಡೆದ ಪ್ರಧಾನಿ, ಮಲೇಷಿಯಾದ ವಿಭಿನ್ನ ವಿಶ್ವವಿದ್ಯಾನಿಲಯಗಳೊಂದಿಗೆ ಸಹಕರಿಸಿ ದ್ವಿರಾಷ್ಟ್ರಗಳ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಪ್ರಯತ್ನಗಳಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.
ಮೂಲ : ಸಿರಾಜ್ ಡೈಲಿ
ಕನ್ನಡಕ್ಕೆ : ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
ಇರಾನ್ ಒಪ್ಪಂದ ಪಾಲಿಸದಿದ್ದರೆ ನೆತ್ತಿ ಮೇಲೆ ಬಾಂಬ್ ವರ್ಷಣ- ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
“ಬೆಲೆ ಏರಿಕೆ ನನಗೆ ಇಷ್ಟ”-ಇರಾನ್ ಯುದ್ಧದ ಕಾರಣದಿಂದ ಉಂಟಾದ ಬೆಲೆ ಏರಿಕೆಯ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
‘ಯುದ್ಧ ಕೊನೆಗೊಳಿಸುವುದಕ್ಕೆ ಆದ್ಯತೆ ನೀಡಬೇಕು’- ಅಮೆರಿಕದ 14 ಅಂಶಗಳ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ
ಕೊಲೆ ಬೆದರಿಕೆ, ದಂಗೆಯ ಸಾಧ್ಯತೆ; ನಿವಾಸ ಬಿಟ್ಟು ಹೊರಬಾರದ ಪುಟಿನ್- ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ