ಬೆಂಗಳೂರು(ಮೇ 31): ರಾಜ್ಯದ 63 ಸ್ಥಳೀಯ ನಗರ ಸಂಸ್ಥೆ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಹೀನಾಯ ಸೋಲುಂಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈ ಸ್ಥಳೀಯ ಚುನಾವಣೆಯಲ್ಲಿ ಮೈತ್ರಿ ಇಲ್ಲದೆಯೇ ಉತ್ತಮ ಸಾಧನೆ ಮಾಡಿವೆ.
ಕಳೆದ ಬಾರಿಯ ಸ್ಥಳೀಯ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿಯದ್ದೂ ಸ್ವಲ್ಪ ಬಲ ವೃದ್ಧಿಸಿದೆ. 57 ಸ್ಥಳೀಯ ಸಂಸ್ಥೆಗಳ ಫಲಿತಾಂಶ ಪ್ರಕಟವಾಗಿದ್ದು, ಇವುಗಳ 1,221 ವಾರ್ಡ್ಗಳ ಪೈಕಿ ಕಾಂಗ್ರೆಸ್ 509 ವಾರ್ಡ್ಗಳನ್ನು ಗೆದ್ದುಕೊಂಡಿದೆ. ಬಿಜೆಪಿ 366 ಸ್ಥಾನದಲ್ಲಿ ಗೆದ್ದರೆ, ಜೆಡಿಎಸ್ 174 ವಾರ್ಡ್ಗಳನ್ನ ಬುಟ್ಟಿಗೆ ಹಾಕಿಕೊಂಡಿದೆ. 160 ವಾರ್ಡ್ಗಳು ಪಕ್ಷೇತರರ ಪಾಲಾಗಿವೆ.
ಎಂಟು ನಗರಪಾಲಿಕೆಗಳ ಪೈಕಿ ಏಳರಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಕ್ಕಿಲ್ಲ. ಸಾಗರ ನಗರಪಾಲಿಕೆಯಲ್ಲಿ ಜೂನ್ 3ರಂದು ಮತ ಎಣಿಕೆಯಾಗಲಿದೆ. ಇನ್ನುಳಿದ ಎಲ್ಲಾ ಏಳು ನಗರಪಾಲಿಕೆಯಲ್ಲಿ ಅತಂತ್ರ ಫಲಿತಾಂಶ ಬಂದಿದೆ.
33 ಪುರಸಭೆಗಳ ಪೈಕಿ 31ರಲ್ಲಿ ಫಲಿತಾಂಶ ಪ್ರಕಟವಾಗಿದೆ. ಅದರಲ್ಲಿ ಕಾಂಗ್ರೆಸ್ ಪಕ್ಷವೇ 13ರಲ್ಲಿ ಭರ್ಜರಿ ಬಹುಮತ ಪಡೆದು ತನ್ನದಾಗಿಸಿಕೊಂಡಿದೆ. ಬಿಜೆಪಿ ವಶಕ್ಕೆ 5 ಪುರಸಭೆಗಳು ಬಂದಿವೆ. ಜೆಡಿಎಸ್ ಪಕ್ಷ 2 ಪುರಸಭೆಗಳನ್ನ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಇನ್ನುಳಿದ 11 ಪುರಸಭೆಗಳಲ್ಲಿ ಅತಂತ್ರ ಫಲಿತಾಂಶ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಮತ್ತು ನೆಲಮಂಗಲ ಪುರಸಭೆಗಳಲ್ಲಿ ಇವತ್ತು ಮತ ಎಣಿಕೆಯಾಗಿಲ್ಲ.
22 ಪಟ್ಟಣ ಪಂಚಾಯಿತಿ ಪೈಕಿ 18 ಪಟ್ಟಣ ಪಂಚಾಯಿತಿಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಬರೋಬ್ಬರಿ 8ರಲ್ಲಿ ನಿಚ್ಚಳ ಬಹುಮತ ಗಳಿಸಿದೆ. ಕಾಂಗ್ರೆಸ್ ಪಕ್ಷ ಮೂರು ಪಟ್ಟಣ ಪಂಚಾಯಿತಿಗಳನ್ನ ಗೆದ್ದುಕೊಂಡಿದೆ. ಇನ್ನುಳಿದ 7 ಪಟ್ಟಣ ಪಂಚಾಯಿತಿಯಲ್ಲಿ ಅತಂತ್ರ ಫಲಿತಾಂಶ ಬಂದಿದೆ.
ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ:
ಫಲಿತಾಂಶ ಪ್ರಕಟವಾದ ಒಟ್ಟು ವಾರ್ಡ್ಗಳು: 1,221
ಕಾಂಗ್ರೆಸ್: 509
ಬಿಜೆಪಿ: 366
ಜೆಡಿಎಸ್: 174
ಬಿಎಸ್ಪಿ: 3
ಪಕ್ಷೇತರರು: 160
ಇತರರು: 7
ಬಿಜೆಪಿ ಬಹುಮತ ಗಳಿಸಿದ ಸಂಸ್ಥೆಗಳು:
ನಗರಸಭೆ: 0
ಪುರಸಭೆ: 5
ಪಟ್ಟಣ ಪಂಚಾಯಿತಿ: 9
ಒಟ್ಟು: 14
ಕಾಂಗ್ರೆಸ್ ಬಹುಮತ ಗಳಿಸಿದ ಸಂಸ್ಥೆಗಳು:
ನಗರಸಭೆ: 2
ಪುರಸಭೆ: 13
ಪಟ್ಟಣ ಪಂಚಾಯಿತಿ: 3
ಒಟ್ಟು: 18
ಜೆಡಿಎಸ್ ಬಹುಮತ ಗಳಿಸಿದ ಸಂಸ್ಥೆಗಳು:
ನಗರಸಭೆ: 0
ಪುರಸಭೆ: 2
ಪಟ್ಟಣ ಪಂಚಾಯಿತಿ: 0
ಒಟ್ಟು: 2















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ