ಅಜ್ಮಾನ್: ಕೆಲಸ ನೀಡುವ ಆಮಿಷ ನೀಡಿ ಯುವಕರನ್ನು ಸಂದರ್ಶಕ ವಿಸಾದಲ್ಲಿ ಗಲ್ಫ್ಗೆ ಕರೆತಂದು ವಂಚಿಸುವ ಜಾಲ ಇನ್ನೂ ಕಾರ್ಯಾಚರಿಸುತ್ತಿದ್ದು, ಕೇರಳದ ವಿವಿಧ ಕಡೆಯಿಂದ ಬಂದ ಯುವಕರು ಯುಎಇಯ ಅಜ್ಮಾನಿನಲ್ಲಿ ಯಾತನೆ ಅನುಭವಿಸುತ್ತಿದ್ದಾರೆ. ವಿಸಾಗಾಗಿ ಭಾರೀ ಮೊತ್ತದ ಹಣವನ್ನು ಏಜನ್ಸಿಗಳು ಇವರಿಂದ ಪಡೆದಿದ್ದಾರೆ ಎನ್ನಲಾಗಿದೆ. ತಿಂಗಳುಗಳು ಕಳೆದರೂ ಇವರಿಗೆ ಯಾವುದೇ ಕೆಲಸ ಸಿಗದಿದ್ದು, ಅಜ್ಮಾನ್ ಒಂದರಲ್ಲೇ ಸುಮಾರು ನೂರಕ್ಕಿಂತಲೂ ಹೆಚ್ಚು ಮಂದಿ ಸಿಲುಕಿಕೊಂಡಿದ್ದಾರೆ.
ಪೆರಿಂದಲ್ಮಣ್ಣಾದ ಕ್ಯಾಲಿಕೆಟ್ ಟ್ರಾವೆಲ್ಸ್, ಅಡೂರಿನ ಅಡೂರ್ ಜಾಬ್ಸ್, ವಂಡೂರಿನ ಬಿಸ್ಮಿ ಟ್ರಾವಲ್ಸ್ ಮುಂತಾದ ಸಂಸ್ಥೆಗಳಿಗೆ ಐವತ್ತು ಸಾವಿರದಿಂದ ಒಂದು ಲಕ್ಷದವರೆಗೆ ನೀಡಿ ಇವರ ಪೈಕಿ ಹೆಚ್ಚಿನವರು ಯುಎಇ ತಲುಪಿದ್ದಾರೆ. ಈ ಹಿಂದೆ ಇದೇ ತರಹದ ವಂಚೆನೆ ಮಾಡಿದ್ದ ಶಾಜಹಾನ್, ನೌಶಾದ್, ಜಯಪ್ರಕಾಶ್, ಮುಜೀಬ್ ಮುಂತಾದವರೇ ಯುಎಇಯಲ್ಲಿ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.
ಪ್ರಸಕ್ತ ಈ ಯುವಕರೂ ವಾಸವಿರುವ ಸ್ಥಳದಿಂದ ಹೊರದಬ್ಬಲ್ಪಡುವ ಶೋಚನೀಯ ಪರಿಸ್ಥಿತಿಯಲ್ಲಿದ್ದು, ಇಪ್ಪತ್ತು ಸಾವಿರ ಕೂಡ ಖರ್ಚಿಲ್ಲದೆ ಲಭಿಸುವ ವಿಸಾ ನೀಡಿ ಈ ಯುವಕರಿಂದ ಲಕ್ಷಾಂತರ ರೂ. ಪಡೆದು ವಂಚಿಸಲಾಗಿದೆ. ಈ ಬಗ್ಗೆ ಹಲವಾರು ಪ್ರಕರಣಗಳು ವರದಿಯಾಗುತ್ತಿದ್ದರೂ ವಂಚಿತರಾಗುವವರಿಗೆ ಯಾವುದೇ ಕೊರತೆ ಇಲ್ಲ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು