ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಳಯ ಹಾಗೂ ಇನ್ನಿತರ ತುರ್ತು ಸಂದರ್ಭದಲ್ಲಿ ಕಾರ್ಯಾಚರಣೆ ನಡೆಸಲು ಜಿಲ್ಲೆಯಾದ್ಯಂತ ವಿವಿಧ ತಾಲೂಕುಗಳಿಂದ ಆಯ್ಕೆಯಾದ ಅಧಿಕೃತವಾಗಿರುವ ಸ್ವಯಂಸೇವಕರಿಗೆ ಅಧಿಕೃತ ಬಾಡ್ಜ್ ವಿತರಿಸಲಾಯಿತು.
ರೆಡ್ ಕ್ರಾಸ್ ಸಂಸ್ಥೆಯ ಮುಖ್ಯಸ್ಥರಾದ ಎಸ್.ಎ.ಪ್ರಭಾಕರ ಶರ್ಮ, ಪ್ರವೀಣ್ ಹಾಗೂ ಎಸ್ಸೆಸ್ಸೆಫ್ ದ.ಕ ಬ್ಲಡ್ ಸೈಬೋ ಸಂಚಾಲಕರಾದ ಕರೀಂ ಕದ್ಕಾರ್, ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಎ.ಎಂ.ಫೈಝಲ್ ಝುಹ್’ರಿ, ಜಿ.ಕೆ.ಇಬ್ರಾಹಿಂ ಅಂಜದಿ, ಸುಹೈಲ್ ಮಂಗಳೂರು, ಸುಳ್ಯ ಡಿವಿಷನ್ ಬ್ಲೆಡ್ ಸೈಬೋ ಉಸ್ತುವಾರಿ ಸಿದ್ದೀಖ್ ಗೂನಡ್ಕ ಹಾಗೂ ಇನ್ನಿತರ ಸಂಘಟನೆಗಳ ನೇತಾರರೂ ಕಾರ್ಯಕರ್ತರೂ ಭಾಗವಹಿಸಿದರು.
ಸ್ವಯಂಸೇವಕರಿಗೆ ಬೇಕಾದ ಮಾಹಿತಿಯನ್ನು ಹಾಗೂ ಸಂಸ್ಥೆಯು ನೀಡುತ್ತಿರುವ ಬ್ಯಾಡ್ಜ್ ನ ಉಪಯೋಗದ ಕುರಿತು ಸಂಸ್ಥೆಯ ಮುಖ್ಯಸ್ಥರು ವಿವರಿಸಿದರು. ತುರ್ತು ಸಂದರ್ಭದಲ್ಲಿ ಸ್ವಯಂ ಶರೀರವನ್ನು ರಕ್ಷಿಸುವುದರೊಂದಿಗೆ ಇತರರಿಗೆ ಬೇಕಾದ ಸೇವೆ ಮಾಡುವಂತೆಯೂ ಅಧಿಕಾರಿಗಳೊಂದಿಗೆ ತುರ್ತು ಕಾರ್ಯಾಚರಣೆಯಲ್ಲಿ ಪೂರ್ಣವಾಗಿಯೂ ಸಹಕರಿಸುವಂತೆಯೂ ಅವರು ನಿರ್ದೇಶಿಸಿದರು.
ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ನಿಂದ ರಿಯಾಝ್ ನೆಕ್ಕಿಲ, ನೌಷಾದ್ ಕೆರೆಮೂಲೆ, ಅಬ್ದುರ್ರಹ್ಮಾನ್ ಮೊಗರ್ಪಣೆ, ಅಬ್ದುಲ್ ಮಾಲಿಕ್ ಕುಂಬಕ್ಕೋಡು, ಬಿ.ಎಂ.ರಫೀಕ್ ನಾವೂರು, ಅಶ್ರಫ್ ಕೊಯನಾಡು, ಹಸೈನಾರ್ ಗುತ್ತಿಗಾರು, ಅಶ್ರಫ್ ಗೂನಡ್ಕ, ಸಿದ್ದೀಖ್ ಕಟ್ಟೆಕ್ಕಾರ್, ಬಿ.ಎ.ಸಿದ್ದೀಖ್ ಗಾಂಧಿನಗರ, ಮುಸ್ತಫ ಸಮಾಧಿ, ಬಾತಿಷ ಸಮಾಧಿ, ಶಿಹಾಬುದ್ದೀನ್ ನೆಕ್ಕಿಲ ಮೊದಲಾದವರು ರೆಡ್ ಕ್ರಾಸ್ ಸಂಸ್ಥೆಯ ಸ್ವಯಂಸೇವಾ ಬ್ಯಾಡ್ಜ್ ನ್ನು ಸ್ವೀಕರಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ