ಬಿ.ಸಿ.ರೋಡ್: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ವಿಸ್ಡಂ ಟೀಮ್ ವತಿಯಿಂದ ಶಾಲಾ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ,ಪೋಷಕರಿಗೆ ಹಾಗೂ ಅಧ್ಯಾಪಕರಿಗೆ ನುರಿತ ತರಬೇತುದಾರರಿಂದ ತರಬೇತಿಯನ್ನು ಹಮಿಕೊಂಡಿದ್ದು.
ಅದರ ಭಾಗವಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ತರಬೇತುದಾರರಿಗೆ ರಾಜ್ಯ ಮಟ್ಟದ ತರಬೇತಿ ಎಜ್ಯು ಸಮ್ಮಿಟ್ ಟ್ರೈನರ್ಸ್ ಟ್ರೈನಿಂಗ್ ಕಾರ್ಯಾಗಾರವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯದ್ ಉಮ್ಮರ್ ಅಸ್ಸಖಾಫ್ ತಂಙಳ್ ಮದನಿರವರ ಅಧ್ಯಕ್ಷತೆಯಲ್ಲಿ ಜೂನ್ 30 ಆದಿತ್ಯವಾರ ಬೆಳಿಗ್ಗೆ 9:00 ಗಂಟೆಯಿಂದ ಬಿ.ಸಿ.ರೋಡ್ ನ ಸ್ಪರ್ಶಾ ಹಾಲ್ ನಲ್ಲಿ ನಡೆಯಲಿರುವುದು.
ಕರ್ನಾಟಕ ರಾಜ್ಯ ಸರ್ಕಾರದ ಸಚಿವರಾದ ಮಾನ್ಯ ಯು.ಟಿ.ಖಾದರ್ ಕಾರ್ಯಕ್ರಮವನ್ನು ಉಧ್ಘಾಟಿಸಲಿರುವರು.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯದ್ ಸಿ.ಟಿ.ಎಂ ಉಮ್ಮರ್ ಅಸ್ಸಖಾಫ್ ತಂಙಳ್ ಮನ್ಶರ್ ಹಾಗೂ ಎಸ್ಸೆಸ್ಸೆಫ್ ರಾಷ್ಟ್ರೀಯ ನಾಯಕ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ತರಗತಿಯನ್ನು ನಡೆಸಲಿರುವರು.
ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ,ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ,ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ,ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ