ಕುವೈತ್ ನಗರ: ಕುವೈತ್ನಲ್ಲಿರುವ ವೀದೇಶೀಯರು ಕೆಲಸ ಬದಲಾಯಿಸ ಬೇಕಿದ್ದರೆ ಇನ್ನು ಮುಂದೆ ದೇಶದಿಂದ ಹೊರಗೆ ಹೋಗಿ ಮತ್ತೊಂದು ವಿಸಾದಲ್ಲಿ ಬರಬೇಕು. ಯಾವುದಾದರೂ ವಿಸಾದಲ್ಲಿ ಬಂದು ಕೆಲಸ ಹುಡುಕುವವರ ಸಂಖ್ಯೆಯನ್ನು ಕಡಿಮೆಗೊಳಿಸುವುದು ಈ ಕ್ರಮದ ಹಿಂದಿರುವ ಉದ್ದೇಶವಾಗಿದೆ. ಅಲ್ಲದೆ ಇಪ್ಪತ್ತರಷ್ಟು ಹುದ್ದೆಗಳಿಗೆ ಬರಹ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಆರ್ಥಿಕ ಖಾತೆಯ ಸಚಿವಾಲಯ ವ್ಯಕ್ತಪಡಿಸಿದೆ.
ಯಾವುದಾದರೂ ವಿಸಾ ಪಡೆದು ಕುವೈತ್ಗೆ ಬಂದು ಉನ್ನತ ಹುದ್ದೆಯ ಕೆಲಸ ಪಡೆಯುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗತೊಡಗಿರುವ ಹಿನ್ನಲೆಯಲ್ಲಿ ಈ ನಡೆ ಸ್ವೀಕರಿಸಲಾಗಿದೆ ಎನ್ನಲಾಗಿದೆ. ಕುವೈತ್ ಗೆ ಬಂದ ನಂತರ ಪಡೆಯುವ ವಿದ್ಯಾಭ್ಯಾಸ ಯೋಗ್ಯತೆಯನ್ನು ಕೂಡ ವಿಸಾ ಬದಲಾವಣೆಗೆ ಪರಿಗಣಿಸಲಾಗುವುದಿಲ್ಲ.
ಅದೇ ರೀತಿ ಮುಂದಿನ ವರ್ಷದಿಂದ ಖಾಸಗಿ ವಲಯದಿಂದ ಸಾರ್ವಜನಿಕ ವಲಯಕ್ಕೂ, ಸಾರ್ವಜನಿಕ ವಲಯದಿಂದ ಖಾಸಗಿ ವಲಯಕ್ಕೂ ಇಖಾಮಾ ಬದಲಾವಣೆ ಮಾಡುವುದನ್ನು ಅನುಮತಿಸಲಾಗುವುದಿಲ್ಲ. ಒಂದೇ ವಲಯದಲ್ಲೂ ಇಖಾಮಾ ಬದಲಾವಣೆ ಮಾಡುವುದಕ್ಕೂ ಕಠಿಣ ನಿಯಂತ್ರಣ ತರಲಾಗುವುದು ಎಂದು ಖಾತೆಯ ಸಚಿವರು ವ್ಯಕ್ತಪಡಿಸಿದ್ದಾರೆ.
ಉನ್ನತ ವಿದ್ಯಾಭ್ಯಾಸ ಯೋಗ್ಯತೆ ಇದ್ದರೂ, ಕೆಲಸ ಬದಲಾವಣೆ ಸಾಧ್ಯವಿಲ್ಲ. ಕಾರ್, ಮೆಕ್ಯಾನಿಕ್, ಇಲೆಕ್ಟ್ರೀಷನ್, ಪ್ಲಂಬರ್ ಮುಂತಾದ ಇಪ್ಪತ್ತರಷ್ಟು ಕೆಲಸಗಳಿಗೆ ಬರಹ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗುತ್ತದೆ. ದೇಶದಲ್ಲಿ ಅಧಿಕ ಇರುವ ಪರಿಣಿತರಲ್ಲದ ಕೆಲಸಗಾರರ ಸಂಖ್ಯೆಯನ್ನು ಕಡಿಮೆಗೊಳಿಸುವುದು, ವಿಸಾ ವ್ಯಾಪಾರಗಳ ಮೂಲಕ ವಂಚಿತರಾಗುವವರ ಸಂಖ್ಯೆಯನ್ನು ಕಡಿಮೆಗೊಳಿಸುವುದು ಮುಂತಾದ ಉದ್ದೇಶಗಳಿಗಾಗಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು