ಮಂಗಳೂರು.ಜು,3: ನಿನ್ನೆ ಮಂಜನಾಡಿ ಅಲ್ ಮದೀನ ಶಿಕ್ಷಣ ಸಂಸ್ಥೆಯ ಕ್ಯಾಂಪಸ್ಸಿನಲ್ಲಿ ಅಜ್ಜಿ ಮತ್ತು ಮೊಮ್ಮಗ ಮಾತ್ರ ಕುಳಿತಿದ್ದ ಆಟೊ ರಿಕ್ಷಾವೂಂದು ಇದ್ದಕ್ಕಿದ್ದಂತೆ ಡ್ರೈವರ್ ಇಲ್ಲದೆ ಸ್ವಯಂಚಾಲಿತವಾಗಿ ಮುಂದೆ ಸಾಗುವುದನ್ನು ಗಮನಿಸಿದ ಇಕ್ಬಾಲ್ ಮರ್ಝೂಖಿ ಸಖಾಫಿ ಉಸ್ತಾದರು ತನ್ನ ಪ್ರಾಣವನ್ನು ಒತ್ತೆಯಿಟ್ಟು ಆಟೊ ರಿಕ್ಷಾವನ್ನು ಬೆಂಬತ್ತಿ ಎರಡು ಮುಗ್ದ ಜೀವಗಳನ್ನು ಅಪಾಯದಿಂದ ಪಾರು ಮಾಡಿದ್ದಾರೆ.
ಅದರ ಸಿಸಿಟಿವಿ ದೃಶ್ಯದ ವಿಡಿಯೋ ತುಣುಕು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇಕ್ಬಾಲ್ ಮರ್ಝೂಖಿ ಸಖಾಫಿ ಉಸ್ತಾದರ ಸಮಯ ಪ್ರಜ್ಞೆ ಧೈರ್ಯ ಸಾಹಸವನ್ನು ಮೆಚ್ಚಲೇಬೇಕು. ಯಾಕೆಂದರೆ ಮೂರು ಚಕ್ರದ ವಾಹನವೊಂದು ಅಷ್ಟು ವೇಗವಾಗಿ ಚಲಿಸುತ್ತಿರುವಾಗ. ಅದನ್ನು ನಿಯಂತ್ರಿಸುವುದು ಅಷ್ಟು ಸುಲಭದ ಕೆಲಸವಲ್ಲ. ಅವರು ಅಟೋರಿಕ್ಷಾದ ಹ್ಯಾಂಡಲನ್ನು ಸಮಯಪ್ರಜ್ಞೆಯಿಂದ ನಿಯಂತ್ರಿಸುತ್ತಿರದಿದ್ದರೆ ಅವರ ಮೇಲೆಯೇ ಅಟೋ ಬೀಳುವ ಸಂಭವವಿತ್ತು. ಆದರೂ ಅದನ್ನೆಲ್ಲಾ ಮೀರೀ ತನ್ನ ಪ್ರಾಣವನ್ನೆ ಒತ್ತೆಯಿಟ್ಟು ಎರಡು ಮುಗ್ದ ಜೀವಗಳನ್ನು ರಕ್ಷಿಸಿದ ಉಸ್ತಾದರಿಗೊಂದು ಬಿಗ್ ಸೆಲ್ಯೂಟ್.
ವರದಿ : ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್