ಮದೀನಾ ಮುನವ್ವರ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ಸೌದಿ ಅರೇಬಿಯಾ.. ಇದರ ಮದೀನಾ ಮುನವ್ವರ ಝೋನ್ ಹಂತದ MRF ಸಾಂತ್ವನ ನಿಧಿ ಯೋಜನೆಯ ಸಭೆಯು ಮದೀನಾದ ಕೆ.ಸಿ.ಎಫ್ ಭವನದಲ್ಲಿ ಇಂದು ನಡೆಯಿತು.

ಕಾರ್ಯಕ್ರಮವನ್ನು ಝೋನ್ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಅಶ್ರಫ್ ಸಖಾಫಿ ನೂಜಿ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸೌದಿ ರಾಷ್ಟ್ರೀಯ ಸಾಂತ್ವನ ಇಲಾಖೆ ಕನ್ವೀನರ್ ಅಶ್ರಫ್ ಹಾಜಿ ಕಿನ್ಯ ಮಾತನಾಡಿ MRF ಪ್ರಾರಂಭಿಸಿ ವರ್ಷ ಯೋಜನೆಯ ಫಲಾನುಭವಿಗಳಿಗೆ ಹತ್ತು ಲಕ್ಷಕ್ಕಿಂತ ಅಧಿಕ ಹಣವನ್ನು ವಿತರಿಸಲಾಗಿದ್ದು, MRF ಸದಸ್ಯರ ಮರಣ ಸಂಭವಿಸಿದಾಗ ಅವರ ಕುಟುಂಬಕ್ಕೆ ಉತ್ತಮ ರೀತಿಯ ಅರ್ಥಿಕ ಸಹಾಯ ತಲುಪಿಸಲು ಸಾಧ್ಯವಾಗಿದ್ದು 2019-20ಸಾಲಿನ MRF ಯೋಜನೆಗೆ ಸೌದಿಯ ವಿವಿಧ ಕಡೆಗಳಲ್ಲಿ ಇಂದು ಅಧಿಕೃತವಾಗಿ ಚಾಲನೆ ದೊರೆಯಲಿದೆ ಎಂದು ತಿಳಿಸಿದರು.

MRF ಗುರುತಿನ ಚೀಟಿಯನ್ನು ಮದೀನಾ ಸೆಕ್ಟರ್ ಕೋಶಾಧಿಕಾರಿ ಸುಲೈಮಾನ್ ತುರ್ಕಳಿಕೆಯರಿಗೆ ನೀಡುವ ಮೂಲಕ ಮದೀನಾ ಝೋನ್ ಹಂತದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಕೆ.ಸಿ.ಎಫ್ ಮದೀನಾ ಮುನವ್ವರ ಸೆಕ್ಟರ್ ಸಾಂತ್ವನ ವಿಭಾಗದ ಕನ್ವಿನರ್ ಅಬ್ದುಲ್ ಜಬ್ಬಾರ್ ಕಾವಳಕಟ್ಟೆ, ಸಲಾಮ್ ಆತೂರು , ಸಿದ್ದೀಕ್ ಕನ್ಯಾನ, ಆಸಿಫ್ ಬದ್ಯಾರ್ ಸಹಿತ ಸೆಕ್ಟರ್, ಝೋನ್ ಸಮಿತಿಯ ನಾಯಕರು ಭಾಗವಹಿಸಿದ್ದರು.
ಪ್ರಧಾನ ಕಾರ್ಯದರ್ಶಿ ಹುಸೈನಾರ್ ಮಾಪಲ್ ನಿರೂಪಿಸಿ ಸ್ವಾಗತಿಸಿದ, ಕಾರ್ಯಕ್ರಮನ್ನು ಮದೀನಾ ಸೆಕ್ಟರ್ ಕಾರ್ಯದರ್ಶಿ ಅಶ್ರಫ್ ದೇರಳಕಟ್ಟೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ