ಬೆಂಗಳೂರು, ಜು.8: ಬಿಜೆಪಿ, ನಿರಂತರವಾಗಿ ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ನಡೆಸುತ್ತಲೇ ಇದೆ, ಅತೃಪ್ತ ಶಾಸಕರನ್ನು ಮುಂಬೈಗೆ ಕರೆದೊಯ್ದ ವಿಶೇಷ ವಿಮಾನ ಬಿಜೆಪಿಯ ರಾಜ್ಯ ಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರಿಗೆ ಸೇರಿದೆ ಎಂದು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದ ಸದಸ್ಯರಿಗೆ ಇಂದು ಉಪಹಾರ ಕೂಟ ಆಯೋಜಿಸಲಾಗಿದೆ, ಮುಂದಿನ ಎಲ್ಲಾ ಆಯ್ಕೆಗಳ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ, ಅಗತ್ಯ ಬಿದ್ದರೆ ಎಲ್ಲಾ ಸಚಿವರಿಂದ ರಾಜೀನಾಮೆ ಪಡೆದು ಅತೃಪ್ತ ಶಾಸಕರಿಗೆ ಅವಕಾಶ ಕಲ್ಪಿಸುವ ಸಾಧ್ಯತೆಯೂ ಇದೆ, ಕಾನೂನಾತ್ಮಕ ಹೋರಾಟವನ್ನು ನಡೆಸುವ ಬಗ್ಗೆಯೂ ಚರ್ಚೆ ನಡೆಸುತ್ತೇವೆ, ಇಂದಿನ ಸಭೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್, ಶಾಸಕಾಂಗ ನಾಯಕ ಸಿದ್ದರಾಮಯ್ಯ ಭಾಗವಹಿಸುತ್ತಾರೆ ಎಂದು ತಿಳಿಸಿದರು.
ಬಿಜೆಪಿ ಕುದುರೆ ವ್ಯಾಪಾರ ನಡೆಸುತ್ತಿದೆ. ವಿಶೇಷ ವಿಮಾನದಲ್ಲಿ ಶಾಸಕರನ್ನು ಕರೆದೊಯ್ದಿದ್ದಾರೆ, ಈ ವಿಮಾನ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರಿಗೆ ಸೇರಿದ್ದು ಎಂದು ಗೊತ್ತಾಗಿದೆ, ಇಂದಿನ ಈ ಎಲ್ಲಾ ಬೆಳವಣಿಗೆಗಳಿಗೆ ಬಿಜೆಪಿಯೇ ಕಾರಣ ಎಂದು ಅವರು ನೇರ ಆರೋಪ ಮಾಡಿದರು.
ಈಗಾಗಲೇ ಬಿಜೆಪಿಯವರು ಆರು ಬಾರಿ ಸರ್ಕಾರ ಉರುಳಿಸುವ ಯತ್ನ ನಡೆಸಿದ್ದಾರೆ, ದೆಹಲಿ ನಾಯಕರಿಂದ ರಾಜ್ಯದ ನಾಯಕರವರೆಗೂ ಈ ಯತ್ನ ನಡೆಯುತ್ತಿದೆ. ಮುಂಬೈನಲ್ಲಿ ಅತೃಪ್ತ ಶಾಸಕರು ವಾಸ್ತವ್ಯ ಹೂಡಿರುವುದು ಒಳ್ಳೆಯ ಬೆಳವಣಿಗೆಯಲ್ಲ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಸುಭದ್ರವಾಗಿರಬೇಕು, ಆದರೆ, ಈಗಿನ ಬೆಳವಣಿಗೆಯಿಂದ ಬೇಸರವಾಗಿದೆ. ನಿನ್ನೆ ರಾತ್ರಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಸುದೀರ್ಘ ಚರ್ಚೆ ನಡೆಸಿದ್ದೇವೆ, ಶಾಸಕರ ಮನವೊಲಿಸುವ ಬಗ್ಗೆ ಮಾತುಕತೆ ನಡೆಸಿದ್ದೇವೆ, ಕಾನೂನು ಹೋರಾಟ ನಡೆಸುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.
ನಾನೂ ಕೆಲವು ಶಾಸಕರ ಜೊತೆ ಮಾತನಾಡಿದ್ದೇನೆ, ಆದರೆ, ಅವರು ಬಹಳ ಮುಂದೆ ಬಂದಿದ್ದೇವೆ ಎಂದು ಹೇಳಿದ್ದಾರೆ. ಸರ್ಕಾರ ಉಳಿಸಿಕೊಳ್ಳಲು ನಾವು ಏನು ಬೇಕಾದರೂ ತೀರ್ಮಾನ ಮಾಡುತ್ತೇವೆ, ಸ್ಪೀಕರ್ ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.
ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸಿದ ಡಾ.ಜಿ. ಪರಮೇಶ್ವರ್, ರಾಜ್ಯಪಾಲರು ಶಾಸಕರ ಕುದುರೆ ವ್ಯಾಪಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ, ರಾಜೀನಾಮೆ ಕೊಡಲು ಹೋದ ಶಾಸಕರ ಜೊತೆ ಚರ್ಚೆ ನಡೆಸುವ ಅಗತ್ಯವೇನು ?, ಅದೂ ಎರಡು ಗಂಟೆ ಕಾಲ ಶಾಸಕರ ಜೊತೆ ಚರ್ಚೆ ನಡೆಸುತ್ತಾರೆ, ಪೊಲೀಸ್ ಆಯುಕ್ತರ ಜತೆ ಶಾಸಕರ ಜತೆ ಕೂರಿಸಿ ಮಾತನಾಡಿದ್ದಾರೆ, ಇವೆಲ್ಲ ಗಮನಿಸಿದರೆ ರಾಜ್ಯಪಾಲರು ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ್ದಾರೆ ಅನ್ನಿಸುತ್ತದೆ ಎಂದು ಆರೋಪಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ