ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಗ್ರಾಮವೊಂದರ ಅಪ್ರಾಪ್ತ ಬಾಲಕಿಯನ್ನು ಬೇರೆ ಬೇರೆ ಸಂದರ್ಭದಲ್ಲಿ ಐವರು ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ವಿಟ್ಲ ನಿವಾಸಿಯಾಗಿರುವ ಅಪ್ರಾಪ್ತೆ ಮೇಲೆ ಗ್ರಾಮ ಪಂಚಾಯತ್ ಸಿಬ್ಬಂದಿ ಸೇರಿ ಐವರು ನಿರಂತರ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ಈ ಕುರಿತು ಯುವತಿ ಐವರ ವಿರುದ್ಧ ಸಂತ್ರಸ್ತೆ ವಿಟ್ಲ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ.
ಐವರಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಗಣೇಶ್, ಧನುಷ್ ನಾಯ್ಕ್ ಮತ್ತು ಕೃಷ್ಣ ನಾಯ್ಕ್ ಬಂಧಿತರು.ಬಾಲಕಿಯನ್ನು ಗಣೇಶ್ ಎಂಬಾತ ಕಳೆದ ವರ್ಷ ಡಿಸೆಂಬರ್ನಲ್ಲಿ ಮತ್ತು ಈ ವರ್ಷದ ಮಾರ್ಚ್ನಲ್ಲಿ ಸುಬ್ರಹ್ಮಣ್ಯದಲ್ಲಿ ಪೂಜೆ ನೆಪದಲ್ಲಿ ಕರೆದುಕೊಂಡು ಹೋಗಿ ಎರಡು ಬಾರಿಯು ಎರಡು ದಿನ ಲಾಡ್ಜ್ನಲ್ಲಿರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಲಾಗಿದೆ.
ಈ ವರ್ಷದ ಜನವರಿಯಿಂದ ಯುವತಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ಸಂದರ್ಭದಲ್ಲಿ ಅತ್ಯಾಚಾರ ಮಾಡಿದ ಆರೋಪಿಗಳು ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಂದು ಬಿಡುತ್ತೇವೆ ಎಂದು ಬೆದರಿಸಿದ್ದರು ಎನ್ನಲಾಗಿದೆ. ಇಂದು ವಿಟ್ಲ ಠಾಣೆಯಲ್ಲಿ ಬಾಲಕಿ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್