ಮದೀನಾ ಮುನವ್ವರ,ಜುಲೈ.10: ಬೆಂಗಳೂರಿನ ಬೈತುಲ್ ಹರಮ್ ಇಂಟರ್ನ್ಯಾಷನಲ್ ಉಮ್ರಾ ಗ್ರೂಪ್ ಮೂಲಕ ಉಮ್ರಾ ಯಾತ್ರಾರ್ಥಿಗಳಾಗಿ ಬಂದು ಊರಿಗೆ ಹಿಂದಿರುಗುವ ವ್ಯವಸ್ಥೆ ಕಲ್ಪಿಸದೆ ಟ್ರಾವೆಲ್ಸ್’ನಿಂದ ವಂಚನೆಗೊಳಪಟ್ಟು ರೂಮ್ ಹಾಗೂ ಊಟದ ವ್ಯವಸ್ಥೆ ಇಲ್ಲದೆ ಮಹಿಳೆಯರು, ವಯಸ್ಕರು ಮಕ್ಕಳನ್ನೊಳಗೊಂಡ 81 ಮಂದಿ ಉಮ್ರಾ ತಂಡ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ವೈರಲ್ ವಿಡಿಯೋ ಮೂಲಕ KCF ಮದೀನಾ ಮುನವ್ವರ ಸೆಕ್ಟರ್ ಸಾಂತ್ವನ ಇಲಾಖೆಯ ಗಮನಕ್ಕೆ ಬಂದಾಗ ಯಾತ್ರಾರ್ಥಿಗಳನ್ನು ಭೇಟಿಯಾಗಿ ಸಾಂತ್ವನ ಪಡಿಸಿ ಬೇಕಾಗುವ ವ್ಯವಸ್ಥೆಮಾಡಿಕೊಡಲಾಗಿದೆ.

ಭಾರತೀಯ ದೂತಾವಾಸ ಕಛೇರಿಯ ಸಹಕಾರದಿಂದ ಮೂರು ಹಂತವಾಗಿ 81 ಮಂದಿಯನ್ನು ಜಿದ್ದಾ ವಿಮಾನ ನಿಲ್ದಾಣ ಮೂಲಕ ಸ್ವದೇಶ ತಲುಪಿಸುವ ವ್ಯವಸ್ಥೆ ಕಲ್ಪಿಸಲಾಗಿದ್ದು.ಜುಲೈ 9ರಂದು ಹೊರಟ 25 ಮಂದಿಯ ಮೊದಲ ತಂಡ ಸ್ವದೇಶ ತಲುಪಿದ್ದು,ಇಂದು ಹೊರಟ 25ಮಂದಿ ಸ್ವದೇಶ ಪ್ರಯಾಣದಲ್ಲಿದೆ. ಉಳಿದ ಎಲ್ಲಾ ಯಾತ್ರಾರ್ಥಿಗಳಿಗೆ ನಾಳೆ ಗುರುವಾರ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ.

ಕೆ.ಸಿ.ಎಫ್ ಸಾಂತ್ವನ ಇಲಾಖೆಯ ಸದಸ್ಯರು ಸಂಕಷ್ಟದಲ್ಲಿರುವ ಯಾತ್ರಾರ್ಥಿಗಳ ವಸತಿ ಕೇಂದ್ರಕ್ಕೆ ಎಲ್ಲಾ ದಿವಸ ಭೇಟಿನೀಡಿ ಬೇಕಾದ ಸಹಾಯ ಹಾಗೂ ಸ್ವದೇಶಕ್ಕೆ ಮರಳುವವರೆಗೆ 3ದಿವಸಗಳ ಊಟದ ವ್ಯವಸ್ಥೆ ಕಲ್ಪಿಸಿ ಸಂಕಷ್ಟದಲ್ಲಿರುವ ಉಮ್ರಾ ತಂಡಕ್ಕೆ ಆಸರೆಯಾಗಿದ್ದಾರೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ