ಗಲ್ಫ್ ಕನ್ನಡಿಗರ ಅತೀದೊಡ್ಡ ಸಾಮಾಜಿಕ ವೇದಿಕೆಯಾದ ಕರ್ನಾಟಕ ಕಲ್ಚರಲ್ ಫೌಂಡೇಷನ್ ಕೆಸಿಎಫ್ ಯು ಎ ಇ ರಾಷ್ಟ್ರೀಯ ಸಮಿತಿ ವಾರ್ಷಿಕ ಮಹಾಸಭೆಯು ದಿನಾಂಕ 05 07-2019 ನೇ ಶುಕ್ರವಾರ ಜುಮಾ ನಮಾಜಿನ ಬಳಿಕ ದುಬೈ ಪರ್ಲ್ ಕ್ರೀಕ್ ಹೋಟೆಲ್ ಸಭಾಂಗಣದಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಳ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಹಿರಿಯ ವಿದ್ವಾಂಸರಾದ ಸಯ್ಯಿದ್ ತ್ವಾಹ ಭಾಪಖಿ ತಂಙಳ್ ದು:ಅ ನೆರವೇರಿಸಿ ಸಭೆಯನ್ನು ಉದ್ಘಾಟಿಸಿದರು, ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಕಾಜೂರು ವಾರ್ಷಿಕ ವರದಿ ವಾಚಿಸಿ, ಡಿವಿಷನ್ ವರದಿ ಗಳನ್ನು ಆಯಾ ವಿಭಾಗದ ಕಾರ್ಯದರ್ಶಿಗಳು ವಾಚಿಸಿದರು. ಕೋಶಾಧಿಕಾರಿ ಜಲೀಲ್ ನಿಝಾಮಿ ಎಮ್ಮೆಮಾಡು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಕೆ ಸಿ ಎ ಫ್ ಅಂತರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಪಿಎಂಎಚ್.ಈಶ್ವರಮಂಗಳ ಹಾಗೂ ಚುನಾವಣಾಧಿಕಾರಿಯಾಗಿ ಆಗಮಿಸಿದ ಅಂತಾರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಇಕ್ಬಾಲ್ ಬೊಳ್ಮಾರ್ ಒಮಾನ್ ರವರ ನೇತೃತ್ವದಲ್ಲಿ ಹಾಲೀ ಸಮಿತಿಯನ್ನು ಬರ್ಕಸ್ತು ಗೊಳಿಸಿ ಈ ಕೆಳಗಿನ ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರು: ಅಬ್ದುಲ್ ಜಲೀಲ್ ನಿಝಾಮಿ
ಪ್ರ.ಕಾರ್ಯದರ್ಶಿ: ಮೂಸ ಹಾಜಿ ಬಸರ
ಕೋಶಾಧಿಕಾರಿ: ಇಬ್ರಾಹಿಮ್ ಬ್ರೈಟ್ ಮಾರ್ಬಲ್
ಸಂಘಟನಾ ವಿಭಾಗ:
ಅಧ್ಯಕ್ಷರು: ಇಕ್ಬಾಲ್ ಕಾಜೂರ್
ಕಾರ್ಯದರ್ಶಿ: ಕಲಂದರ್ ಕಬಕ
ಶಿಕ್ಷಣ ವಿಭಾಗ
ಅಧ್ಯಕ್ಷರು: ಇಬ್ರಾಹಿಮ್ ಸಖಾಫಿ ಕೆದುಂಬಾಡಿ
ಕಾರ್ಯದರ್ಶಿ: ಶಾಹುಲ್ ಹಮೀದ್ ಸಖಾಫಿ ಮಾದಾಪುರ
ವೆಲ್ಫೇರ್ ವಿಭಾಗ
ಅಧ್ಯಕ್ಷರು: ಝೈನುದ್ದೀನ್ ಹಾಜಿ ಬೆಳ್ಳಾರೆ
ಕಾರ್ಯದರ್ಶಿ: ಅಬ್ದುಲ್ ರಹೀಮ್ ಕೋಡಿ
ಆಡಳಿತ ವಿಭಾಗ
ಅಧ್ಯಕ್ಷರು: ಶಾಫೀ ಸಖಾಫಿ ಕೊಂಡಂಗೇರಿ
ಕಾರ್ಯದರ್ಶಿ: ರಫೀಕ್ ಕಲ್ಲಡ್ಕ
ಇಹ್ಸಾನ್ ವಿಭಾಗ
ಅಧ್ಯಕ್ಷರು: ಅಬ್ದುಲ್ಲಾ ಮುಸ್ಲಿಯಾರ್ ಕುಡ್ತಮುಗೇರು
ಕಾರ್ಯದರ್ಶಿ: ಅಬ್ದುಲ್ ಖಾದರ್ ಸಅದಿ ಸುಳ್ಯ
ಪಬ್ಲಿಕೇಷನ್ ವಿಭಾಗ
ಅಧ್ಯಕ್ಷರು: ಅಬ್ದುಲ್ ಕರೀಮ್ ಮುಸ್ಲಿಯಾರ್ ಉರುವಾಲು ಪದವು
ಕಾರ್ಯದರ್ಶಿ: ಅಬ್ದುಲ್ ಹಕೀಮ್ ತುರ್ಕಳಿಕೆ.
ಕೆ ಸಿ ಎಫ್ ಅಂತಾರಾಷ್ಟ್ರೀಯ ನಾಯಕರ ನೇತ್ರತ್ವದಲ್ಲಿ ಹಳೆಯ ಸಮಿತಿಯಿಂದ ನೂತನ ಸಮಿತಿಗೆ ದಾಖಲೆ ಹಾಗೂ ಲೆಕ್ಕ ಪತ್ರಗಳನ್ನು ಹಸ್ತಾಂತರಿಸಲಾಯಿತು. ಝೈನುದ್ದೀನ್ ಹಾಜಿ ಬೆಳ್ಳಾರೆ ಸ್ವಾಗತಿಸಿ. ನೂತನ ಕಾರ್ಯದರ್ಶಿ ಹಾಜಿ ಮೂಸಾ ಬಸರ ಧನ್ಯವಾದಗಳನ್ನು ಅರ್ಪಿಸಿದರು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ